ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಬೃಂದಾವನ ಉದ್ಯಾನವನದಲ್ಲಿ ಅಧಿಕಾರಿಗಳು ಸಂಗೀತ ಕಚೇರಿ ನಡೆಸುವ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಗೌರವ ತೋರಿದ್ದಾರೆ.
ಭಾರತ ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಜಗತ್ತಿನಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಾಗೆಯೇ ದೇಶದಾದ್ಯಂತ ಶೋಕಾಚರಣೆ ಆಚರಿಸಲಿದ್ದು, ರಾಜ್ಯದಲ್ಲಿಯೂ 7 ದಿನಗಳವರೆಗೆ ಶೋಕಾಚರಣೆ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ದೇಶಾದ್ಯಂತ 7 ದಿನ ಶೋಕಾಚರಣೆ ಇದ್ದರೂ ಕಾವೇರಿ ನಿಗಮದ ಅಧಿಕಾರಿಗಳು ಕೆಆರ್ಎಸ್ ಬೃಂದಾವನದಲ್ಲಿ ಮೋಜು ಮಸ್ತಿ ಮಾಡುವ ಮೂಲಕ ಸಂಗೀತ ಕಚೇರಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಪ್ರತಿನಿತ್ಯ ಸಂಜೆ 7 ರಿಂದ 8ರವರೆಗೆ ಕೆಆರ್ಎಸ್ ಬೃಂದಾವನ ಉದ್ಯಾನವನದಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಗುತ್ತದೆ. ಪ್ರಧಾನಿ ನಿಧನದ ನಡುವೆಯು ಎಂದಿನಂತೆ ಅಧಿಕಾರಿಗಳು ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಬಗ್ಗೆ ಕೆಲ ಸ್ಥಳಿಯರು ಹಾಗೂ ಅಲ್ಲಿನ ಪ್ರವಾಸಿಗರು ಪ್ರಶ್ನೆ ಕೇಳಿದ ನಂತರ ಎಚ್ಚೆತ್ತ ಅಧಿಕಾರಿಗಳು ಸಂಗೀತ ಕಾರಂಜಿ ಸ್ಥಗಿತಗೊಳಿಸಿ ಪ್ರವಾಸಿಗರನ್ನು ಅಲ್ಲಿಂದ ಕಳುಹಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…