ಮಂಡ್ಯ

ಮಂಡ್ಯ: ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ಮಂಜೂರು; ಶಾಸಕ ಪಿ.ರವಿಕುಮಾರ್

ಮಂಡ್ಯ: ನಗರದಲ್ಲಿರುವ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಅನುದಾನವ್ನು ಸಪರ್ಮಕವಾಗಿ ಬಳಸಿಕೊಂಡು ಕೆಂಪೇಗೌಡ ಉದ್ಯನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್  ತಿಳಿಸಿದರು.

ಇಂದು(ಜೂ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿ ಬಿಡುಗಡೆಯಾಗಿರುವ ಅನುದಾನದಲ್ಲಿ ಉದ್ಯಾನವನ ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಒಟ್ಟಿಗೆ ಸೇರಿ ಚರ್ಚಿಸಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ  ಕುರಿತು ತೀರ್ಮಾನಿಸೋಣ ಎಂದರು.

ಜೂನ್ 30 ರಂದು ಕೆಂಪೇಗೌಡ ಜಯಂತಿ:
ಜೂನ್ 30 ಭಾನುವಾರವಾಗಿದ್ದು ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಕೃಷಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವರು ಸಹ ಜೂನ್ 30 ರಂದು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಜೂನ್ 27 ರ ಬದಲಾಗಿ ಜೂನ್ 30 ರಂದು ಕೆಂಪೇಗೌಡರ ಜಯಂತಿಯನ್ನು  ಅದ್ದೂರಿಯಾಗಿ ನಡೆಸೋಣ ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಪ್ರತಿ ತಾಲ್ಲೂಕಿಗೂ 1 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರತಿ ತಾಲ್ಲೂಕಿಗೂ 50 ಸಾವಿರ ಅನುದಾನ ನೀಡಲಾಗುತ್ತಿತ್ತು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈ ಬಾರಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ ಒಂದು ಲಕ್ಷ ರೂ ಅನುದಾನ ನೀಡಿರುತ್ತಾರೆ ಎಂದರು.

ಜೂನ್ 30 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಅಂಬೇಡ್ಕರ್ ಭವನದವರೆಗೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಮೆರವಣಿಗೆ ನಡೆಯಲಿದೆ. ಇದರೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಸಂಘ ಸಂಸ್ಥೆಗಳ ಮುಖ್ಯಸ್ಥರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಿಸಬೇಕು ಎಂದು  ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳು ಅಂದಿನ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐದು ಮಹಾನ್ ವ್ಯಕ್ತಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚು ಜನ ಭಾಗವಹಿಸಲು ಹಾಗೂ ಸಂಪನ್ಮೂಲಗಳ ಕ್ರೋಡೀಕರಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ದೊಡ್ಡದ್ದು, ಕೆಂಪೇಗೌಡರ ಜಯಂತಿ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲರೂ ಭಾಗವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

10 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

10 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago