ಮಂಡ್ಯ

ಮಂಡ್ಯ: ಫುಡ್‌ ಪಾಯ್ಸನಿಂಗ್‌ನಿಂದ 29 ವಿದ್ಯಾರ್ಥಿಗಳು ಅಸ್ವಸ್ಥ, ಓರ್ವ ಬಲಿ

ಮಂಡ್ಯ: ಅನಾಥಾಶ್ರಮವೊಂದರಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅದರಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ 6ನೇ ತರಗತಿಯ ಕೆರ್ಲಾಂಗ್‌ (13) ಎನ್ನಲಾಗಿದೆ.

ಹೋಳಿ ಹಬ್ಬದ ಅಂಗವಾಗಿ ಶುಕ್ರವಾರ ಉದ್ಯಮಿಯೊಬ್ಬರು ಆಯೋಜಿಸಿದ್ದ ಸಮಾರಂಭದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಲಾಗಿತ್ತು. ಅನಾಥಾಶ್ರಮದ ಮಕ್ಕಳು ಊಟ ಸೇವಿಸಿದ ನಂತರ ಅವರಲ್ಲಿ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಹಬ್ಬದ ಸಮಾರಂಭದಲ್ಲಿ ಊಟ ಸೆವಿಸಿದ್ದ ಕೆಲ ಸಾರ್ವಜನಿಕರಲ್ಲೂ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಮಾಹಿತಿ ದೊರೆತಿದ್ದು, ಊಟದಲ್ಲಿ ವಿಷ ಇತ್ತೇ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಈ ಘಟನೆ ಕುರಿತಾಗಿ ಮಳವಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮತ್ತು ಆರೋಗ್ಯ ಇಲಾಖೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಬಗ್ಗೆ ಡಿಎಚ್‌ಓ ಡಾ.ಮೋಹನ್‌ ಪ್ರತಿಕ್ರಿಯಿಸಿದ್ದು, ಹೋಳಿ ಹಬ್ಬದ ಪ್ರಯುಕ್ತ ಮಾರ್ವಾಡಿಗಳು ಶುಕ್ರಾವರ ರಾತ್ರಿ ಊಟ ಮಾಡಿಸಿದ್ದರು. ಈ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆಯ ನಂತರ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಆದರೆ, ಓರ್ವ ವಿದ್ಯಾರ್ಥಿಯೊಬ್ಬ ದಿಡೀರ್‌ ಮೃತಪಟ್ಟಿದ್ದಾನೆ. ಪೋಸ್ಟ್‌ ಮಾರ್ಟಮ್‌ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರ ರಾಜ್ಯದವರಾದರೆ, ಇಬ್ಬರು ಸ್ಥಳೀಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago