Mysore
21
clear sky

Social Media

ಭಾನುವಾರ, 22 ಮಾರ್ಚ್ 2026
Light
Dark

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಲಾಯಿತು.

ಫೆ. 20ರಿಂದ 3 ದಿನಗಳ ಕಾಲ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಹೆಲಿಕಾಪ್ಟರ್ ಮೂಲಕ ಬೂದನೂರು ಉತ್ಸವವನ್ನು ಕಣ್ತುಂಬಿಕೊಳ್ಳಬಹುದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಹೋಟೆಲ್ ಅಮರಾವತಿ ಬಳಿ ಇರುವ ಸ್ಥಳವನ್ನು ಪರಿಶೀಲನೆ ನಡೆಸಿದರು.

ಉಪವಿಭಾಗಾಧಿಕಾರಿ ಶಿವಮೂರ್ತಿ, ಅಪರ ಪೊಲೀಸ್ ಅಧಿಕ್ಷಕ ಸಿ.ಇ.ತಿಮ್ಮಯ್ಯ ಹಾಜರಿದ್ದರು.

Tags:
error: Content is protected !!