ಮಂಡ್ಯ

ಮಂಡ್ಯ | 41 ಗ್ರಾಮ ಪಂಚಾಯತಿಗಳು ಕ್ಷಯರೋಗ ಮುಕ್ತ

ಮಂಡ್ಯ : ಜಿಲ್ಲೆಯಲ್ಲಿ 41 ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿಗಳು ಇವೆ ಎಂಬುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹರ್ಷ ವ್ಯಕ್ತಪಡಿಸಿದರು.

ಇಂದು (ಮಾ.24) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಕ್ಷಯರೋಗಕ್ಕೆ ಸಾರ್ವಜನಿಕರು ಹೆದರುತ್ತಿದ್ದರು ದಿನಕ್ಕೆ ಸರಿ ಸುಮಾರು 9000 ಜನ ಕ್ಷಯ ರೋಗಕ್ಕೆ ಬಲಿಯಾಗುತ್ತಿದ್ದರು ಎಂದು ಅಂಕಿ ಅಂಶಗಳು ಹೇಳುತ್ತವೆ ಎಂದರು.

ಅಂದಿನಿಂದ ಇಂದಿನವರೆಗೂ ಆರೋಗ್ಯ ಇಲಾಖೆ ಕ್ಷಯ ರೋಗ ನಿರ್ಮೂಲನೆ ಮಾಡಲು ಹೋರಾಟ ನಡೆಸುತ್ತಲೆ‌ ಇದ್ದಾರೆ‌. ಕ್ಷಯ ರೋಗವನ್ನು ನಿಯಂತ್ರಿಸಲು ಸಾಕಷ್ಟು ಪ್ರಯತ್ನಿಸಿ ಆರೋಗ್ಯ ಇಲಾಖೆ ಯಶಸ್ವಿ ಯಡೆ ಕಾಲು ಇಡುತ್ತಿದೆ‌ ಕ್ಷಯ ರೋಗದ ವಿರುದ್ಧ ಹೋರಾಡಲು ಸಹಕಾರ ನೀಡಿದ ಸರ್ಕಾರಿ, ಖಾಸಗಿ ವೈದ್ಯರು ಹಾಗೂ ಜಿಲ್ಲಾಡಳಿತಕ್ಕೆ ಸರ್ಕಾರದ ಪರವಾಗಿ ಅಭಿನಂದನೆ ತಿಳಿಸಿದರು.

ಹೃದಯ ವೈಶಾಲ್ಯ ಯೋಜನೆಯಡಿ 49 ಇ.ಸಿ.ಜಿ ಯಂತ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡುವ ಮೂಲಕ ಜಿಲ್ಲಾಧಿಕಾರಿ ಕುಮಾರ  ಹೃದಯ ವೈಶಾಲ್ಯತೆ ಮೆರೆದಿದ್ದಾರೆ, ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪೋಷಕರು ತಂಗಲು ಸರಿಯಾದ ವ್ಯವಸ್ಥೆ ಇರಲಿಲ್ಲ, ಇದರ ಕುರಿತು ಎಲ್ಲಾ ಶಾಸಕರೊಡನೆ ಚರ್ಚಿಸಿ ಸಿ.ಎಸ್.ಆರ್ ಫಂಡ್ ಮೂಲಕ 40 ಲಕ್ಷ ರೂ ವೆಚ್ಚದಲ್ಲಿ 100 ಜನ ತಂಗಲು ಮತ್ತು ಸ್ನಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಶೀಘ್ರವೇ ಅದರ ಉದ್ಘಾಟನೆ ನೆರವೇರಲಿದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಆಶಾಲತಾ ಮಾತನಾಡಿ, ಕ್ಷಯರೋಗದ ಕುರಿತು ಜಿಲ್ಲೆಯಲ್ಲಿ ಸುಮಾರು 2 ಲಕ್ಷದ 41 ಸಾವಿರಕ್ಕೂ ಹೆಚ್ಚಿನ ಜನರಿಗೆ ತಪಾಸಣೆ ನಡೆಸಲಾಗಿದೆ, ಅದರಲ್ಲಿ 20,434 ಸಂಶಯಸ್ಪದ ರೋಗಿಗಳು ಕಂಡು ಬಂದಿದ್ದಾರೆ, ಅವರಲ್ಲಿ 8,843 ಉಚಿತ ಎಕ್ಸರೆ ಪರೀಕ್ಷೆ, ಇನ್ನುಳಿದವರಿಗೆ ಕಫಾ ಸೇರಿದಂತೆ ಅಗತ್ಯ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.

2017 ಕ್ಕೆ ಹೋಲಿಸಿದರೆ ಇಂದು ಕ್ಷಯ ರೋಗ ಪ್ರಕರಣಗಳು ಶೇಕಡಾ 20% ರಷ್ಟು ಕಡಿತಗೊಂಡಿದೆ, ಇದಕ್ಕಾಗಿ ಭಾರತ ಸರ್ಕಾರವೂ 2022 ನೇ ಸಾಲಿನಲ್ಲಿ ಜಿಲ್ಲೆಗೆ ಕಂಚಿನ ಪದಕವನ್ನು ನೀಡಿ ಗೊರವಿಸಲಾಗಿದೆ. 2023 ನೇ ಸಾಲಿನಲ್ಲಿ ಕರ್ನಾಟಕದ 10 ಜಿಲ್ಲೆಯಲ್ಲಿ ಪರಿಶೋಧನೆ ನಡೆಸಿದಾಗ ಶೇಕಡಾ 40% ರಷ್ಟು ಕ್ಷಯರೋಗ ನಿರ್ಮೂಲನೆ ಆಗಿದ್ದು ಭಾರತ ಸರ್ಕಾರವು ಕರ್ನಾಟಕಕ್ಕೆ ರಜತ ಪದಕ ನೀಡಿ ಗೌರವಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ. ಶಾಸಕ ಪಿ ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಸೂರ್ ಶುಗರ್ ಕಂಪನಿಯ ನಿಯಮಿತ ಅಧ್ಯಕ್ಷ ಸಿ.ಡಿ ಗಂಗಾಧರ, ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಮೀರಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ. ಮೋಹನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

4 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

4 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

11 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

11 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

11 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

11 hours ago