ಮಂಡ್ಯ

ಮಂಡ್ಯ | ಸಮೀಕ್ಷೆಗೆ ಗೈರು ಹಾಜರಿ ; ಶಿಸ್ತುಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಮಂಡ್ಯ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾಗಿರುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದಿಂದ ೫೦೦೦ ಗಣತಿದಾರರು, ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ:-ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ : ಡಾ.ರಾಮಪ್ರಸಾತ್ ಮನೋಹರ್

ಸುಮಾರು ೧೨೦ ಸಿಬ್ಬಂದಿಗಳು ಗಣತಿ ಕಾರ್ಯಕ್ಕೆ ಹಾಜರಾಗಿರುವುದಿಲ್ಲ ಹಾಗೂ ೧೨೦ ಸಿಬ್ಬಂದಿ ವ್ಯಾಪ್ತಿಯಲ್ಲಿನ ಗಣತಿ ಕಾರ್ಯ ಪ್ರಾರಂಭಿಸಿರುವುದಿಲ್ಲ. ಇದರಿಂದ ಗಣತಿ ಕಾರ್ಯಕ್ಕೆ ತೊಂದರೆಯಾಗುತ್ತಿದ್ದು, ಹಾಜರಾಗದೇ ಇರುವ ಸಿಬ್ಬಂದಿಗಳು ಸೆ.೨೯ರಂದು ಬೆಳಿಗ್ಗೆ ೭ ಗಂಟೆಗೆ ತಮ್ಮ ವ್ಯಾಪ್ತಿಯ ತಹಸಿಲ್ದಾರ್ ಬಳಿ ವರದಿ ಮಾಡಿಕೊಳ್ಳುವುದು. ತಪ್ಪಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಗೈರು ಹಾಜರಿಯ ಬಗ್ಗೆ ತಹಸಿಲ್ದ್ದಾರ್ ಕಚೇರಿಯಿಂದ ಮಾಹಿತಿ ಪಡೆದುಕೊಂಡು ಗೈರು ಹಾಜರಾಗುವವರನ್ನು ಅಮಾನತ್ತುಗೊಳಿಸಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

43 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

53 mins ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

14 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

15 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

15 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

15 hours ago