ಮಂಡ್ಯ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾಗಿರುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದಿಂದ ೫೦೦೦ ಗಣತಿದಾರರು, ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ:-ಕೆಆರ್ಎಸ್ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ : ಡಾ.ರಾಮಪ್ರಸಾತ್ ಮನೋಹರ್
ಸುಮಾರು ೧೨೦ ಸಿಬ್ಬಂದಿಗಳು ಗಣತಿ ಕಾರ್ಯಕ್ಕೆ ಹಾಜರಾಗಿರುವುದಿಲ್ಲ ಹಾಗೂ ೧೨೦ ಸಿಬ್ಬಂದಿ ವ್ಯಾಪ್ತಿಯಲ್ಲಿನ ಗಣತಿ ಕಾರ್ಯ ಪ್ರಾರಂಭಿಸಿರುವುದಿಲ್ಲ. ಇದರಿಂದ ಗಣತಿ ಕಾರ್ಯಕ್ಕೆ ತೊಂದರೆಯಾಗುತ್ತಿದ್ದು, ಹಾಜರಾಗದೇ ಇರುವ ಸಿಬ್ಬಂದಿಗಳು ಸೆ.೨೯ರಂದು ಬೆಳಿಗ್ಗೆ ೭ ಗಂಟೆಗೆ ತಮ್ಮ ವ್ಯಾಪ್ತಿಯ ತಹಸಿಲ್ದಾರ್ ಬಳಿ ವರದಿ ಮಾಡಿಕೊಳ್ಳುವುದು. ತಪ್ಪಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಗೈರು ಹಾಜರಿಯ ಬಗ್ಗೆ ತಹಸಿಲ್ದ್ದಾರ್ ಕಚೇರಿಯಿಂದ ಮಾಹಿತಿ ಪಡೆದುಕೊಂಡು ಗೈರು ಹಾಜರಾಗುವವರನ್ನು ಅಮಾನತ್ತುಗೊಳಿಸಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…