ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಭಾನುವಾರ(ಜೂ.30) ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಚಿಂತಿಸುತ್ತಿದ್ದು, ಮಂಡ್ಯ ಅಥವಾ ಮದ್ದೂರು ಭಾಗದಲ್ಲಿ ಉತ್ತಮ ಸ್ಥಳವನ್ನು ಗುರುತಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಜೊತೆಗೆ ಈ ಬಗ್ಗೆ ಕೇಂದ್ರ ಸಚಿವರೊಂದಿಗೂ ಚರ್ಚಿಸಲಾಗುವುದು ಎಂದರು.
ನಾಡಪ್ರಭು ಕೆಂಪೇಗೌಡರ ದೂರ ದೃಷ್ಟಿ ಮಹತ್ವದಾದದ್ದು, ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸ್ಥಳ ಬೇಕಿತ್ತು, ಆವಾಗ ಕೆಂಪೇಗೌಡರು ಬೆಂಗಳೂರಿನಲ್ಲಿ ವ್ಯಾಪರಕ್ಕೆ ಸ್ಥಳ ನಿಗದಿಪಡಿಸಿ ಉತ್ತಮ ಪೇಟೆಗಳನ್ನು ನಿರ್ಮಾಣ ಮಾಡಿದರು. ಸಮುದ್ರಕ್ಕಿಂತ 3500 ಅಡಿ ಎತ್ತರದಲ್ಲಿದ್ದ ಬೆಂಗಳೂರನ್ನು ರಾಜಧಾನಿಯಾಗಿ ಆಯ್ಕೆ ಮಾಡಿ ಹಲವಾರು ಸೌಲಭ್ಯಗಳನ್ನು ಒದಗಿಸಿ ಲಕ್ಷಾಂತರ ಜನರು ಜೀವನ ನಡೆಸುವ ರೀತಿ ಬೆಂಗಳೂರನ್ನು ನಿರ್ಮಾಣ ಮಾಡಿದ ಹೆಗ್ಗಳಿಕೆ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…