ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಭಾನುವಾರ(ಜೂ.30) ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಚಿಂತಿಸುತ್ತಿದ್ದು, ಮಂಡ್ಯ ಅಥವಾ ಮದ್ದೂರು ಭಾಗದಲ್ಲಿ ಉತ್ತಮ ಸ್ಥಳವನ್ನು ಗುರುತಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಜೊತೆಗೆ ಈ ಬಗ್ಗೆ ಕೇಂದ್ರ ಸಚಿವರೊಂದಿಗೂ ಚರ್ಚಿಸಲಾಗುವುದು ಎಂದರು.
ನಾಡಪ್ರಭು ಕೆಂಪೇಗೌಡರ ದೂರ ದೃಷ್ಟಿ ಮಹತ್ವದಾದದ್ದು, ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸ್ಥಳ ಬೇಕಿತ್ತು, ಆವಾಗ ಕೆಂಪೇಗೌಡರು ಬೆಂಗಳೂರಿನಲ್ಲಿ ವ್ಯಾಪರಕ್ಕೆ ಸ್ಥಳ ನಿಗದಿಪಡಿಸಿ ಉತ್ತಮ ಪೇಟೆಗಳನ್ನು ನಿರ್ಮಾಣ ಮಾಡಿದರು. ಸಮುದ್ರಕ್ಕಿಂತ 3500 ಅಡಿ ಎತ್ತರದಲ್ಲಿದ್ದ ಬೆಂಗಳೂರನ್ನು ರಾಜಧಾನಿಯಾಗಿ ಆಯ್ಕೆ ಮಾಡಿ ಹಲವಾರು ಸೌಲಭ್ಯಗಳನ್ನು ಒದಗಿಸಿ ಲಕ್ಷಾಂತರ ಜನರು ಜೀವನ ನಡೆಸುವ ರೀತಿ ಬೆಂಗಳೂರನ್ನು ನಿರ್ಮಾಣ ಮಾಡಿದ ಹೆಗ್ಗಳಿಕೆ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…