ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಎಚ್ಚರಿಕೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಸಕಾಲ ಯೋಜನೆಯು ನಾಗರೀಕ ಸೇವೆಗಳನ್ನು ನಿಗಧಿತ ಕಾಲದೊಳಗೆ ಪಡೆಯಲು ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಅಧಿಕಾರಿಗಳು ವಿಳಂಬ ಮಾಡದೆ ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಸಿಂಧುತ್ವ ಅರ್ಜಿಗಳ ಪೈಕಿ ಜಾತಿ ಪರಿಶೀಲನಾ ಪ್ರಮಾಣ ಪತ್ರ ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ. ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಜಿಲ್ಲಾಡಳಿತದ ಗಮನಕ್ಕೆ ಕಂಡುಬಂದಿದೆ. ಜೊತೆಗೆ ಅಧಿಕಾರಿಗಳು ಸಕಾಲದ ರ್ಯಾಕಿಂಗ್ ಪ್ರಗತಿಯನ್ನು ಸಾಧಿಸುತ್ತಿಲ್ಲ. ಕೂಡಲೇ ಬಾಕಿ ಉಳಿದಿರುವ ಸಿಂಧುತ್ವ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾಹಿತಿಯನ್ನು ಸಲ್ಲಿಸಬೇಕು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಸಕಾಲದಲ್ಲಿ ಬರುವ ಸಾರ್ವಜನಿಕ ಸೇವೆಯನ್ನು ನೀಡಬೇಕು. ಯಾವುದೇ ರೀತಿಯ ಅಸಡ್ಡೆ ತೋರಿಸಿದರೆ ನೋಟೀಸ್ ಜಾರಿ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…
ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…
ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…
ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…