ಮಂಡ್ಯ

ಮಂಡ್ಯ| ಅಧಿಕಾರಿಗಳು ಕೆಲಸದಲ್ಲಿ ನಿರಾಸಕ್ತಿ ತೋರಿದರೆ ಕ್ರಮ: ಡಿಸಿ ಕುಮಾರ ಎಚ್ಚರಿಕೆ

ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಎಚ್ಚರಿಕೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಸಕಾಲ ಯೋಜನೆಯು ನಾಗರೀಕ ಸೇವೆಗಳನ್ನು ನಿಗಧಿತ ಕಾಲದೊಳಗೆ ಪಡೆಯಲು ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಅಧಿಕಾರಿಗಳು ವಿಳಂಬ ಮಾಡದೆ ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಸಿಂಧುತ್ವ ಅರ್ಜಿಗಳ ಪೈಕಿ ಜಾತಿ ಪರಿಶೀಲನಾ ಪ್ರಮಾಣ ಪತ್ರ ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ. ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಜಿಲ್ಲಾಡಳಿತದ ಗಮನಕ್ಕೆ ಕಂಡುಬಂದಿದೆ. ಜೊತೆಗೆ ಅಧಿಕಾರಿಗಳು ಸಕಾಲದ ರ‍್ಯಾಕಿಂಗ್ ಪ್ರಗತಿಯನ್ನು ಸಾಧಿಸುತ್ತಿಲ್ಲ. ಕೂಡಲೇ ಬಾಕಿ ಉಳಿದಿರುವ ಸಿಂಧುತ್ವ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾಹಿತಿಯನ್ನು ಸಲ್ಲಿಸಬೇಕು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಸಕಾಲದಲ್ಲಿ ಬರುವ ಸಾರ್ವಜನಿಕ ಸೇವೆಯನ್ನು ನೀಡಬೇಕು. ಯಾವುದೇ ರೀತಿಯ ಅಸಡ್ಡೆ ತೋರಿಸಿದರೆ ನೋಟೀಸ್ ಜಾರಿ ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

57 seconds ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

29 mins ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

1 hour ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

1 hour ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

4 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

4 hours ago