ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಎಚ್ಚರಿಕೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಸಕಾಲ ಯೋಜನೆಯು ನಾಗರೀಕ ಸೇವೆಗಳನ್ನು ನಿಗಧಿತ ಕಾಲದೊಳಗೆ ಪಡೆಯಲು ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಅಧಿಕಾರಿಗಳು ವಿಳಂಬ ಮಾಡದೆ ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಸಿಂಧುತ್ವ ಅರ್ಜಿಗಳ ಪೈಕಿ ಜಾತಿ ಪರಿಶೀಲನಾ ಪ್ರಮಾಣ ಪತ್ರ ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ. ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಜಿಲ್ಲಾಡಳಿತದ ಗಮನಕ್ಕೆ ಕಂಡುಬಂದಿದೆ. ಜೊತೆಗೆ ಅಧಿಕಾರಿಗಳು ಸಕಾಲದ ರ್ಯಾಕಿಂಗ್ ಪ್ರಗತಿಯನ್ನು ಸಾಧಿಸುತ್ತಿಲ್ಲ. ಕೂಡಲೇ ಬಾಕಿ ಉಳಿದಿರುವ ಸಿಂಧುತ್ವ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾಹಿತಿಯನ್ನು ಸಲ್ಲಿಸಬೇಕು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಸಕಾಲದಲ್ಲಿ ಬರುವ ಸಾರ್ವಜನಿಕ ಸೇವೆಯನ್ನು ನೀಡಬೇಕು. ಯಾವುದೇ ರೀತಿಯ ಅಸಡ್ಡೆ ತೋರಿಸಿದರೆ ನೋಟೀಸ್ ಜಾರಿ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…