ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಎಚ್ಚರಿಕೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಸಕಾಲ ಯೋಜನೆಯು ನಾಗರೀಕ ಸೇವೆಗಳನ್ನು ನಿಗಧಿತ ಕಾಲದೊಳಗೆ ಪಡೆಯಲು ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಅಧಿಕಾರಿಗಳು ವಿಳಂಬ ಮಾಡದೆ ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಸಿಂಧುತ್ವ ಅರ್ಜಿಗಳ ಪೈಕಿ ಜಾತಿ ಪರಿಶೀಲನಾ ಪ್ರಮಾಣ ಪತ್ರ ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ. ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಜಿಲ್ಲಾಡಳಿತದ ಗಮನಕ್ಕೆ ಕಂಡುಬಂದಿದೆ. ಜೊತೆಗೆ ಅಧಿಕಾರಿಗಳು ಸಕಾಲದ ರ್ಯಾಕಿಂಗ್ ಪ್ರಗತಿಯನ್ನು ಸಾಧಿಸುತ್ತಿಲ್ಲ. ಕೂಡಲೇ ಬಾಕಿ ಉಳಿದಿರುವ ಸಿಂಧುತ್ವ ಅರ್ಜಿಗಳನ್ನು ವಿಲೇವಾರಿ ಮಾಡಿ ಮಾಹಿತಿಯನ್ನು ಸಲ್ಲಿಸಬೇಕು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಸಕಾಲದಲ್ಲಿ ಬರುವ ಸಾರ್ವಜನಿಕ ಸೇವೆಯನ್ನು ನೀಡಬೇಕು. ಯಾವುದೇ ರೀತಿಯ ಅಸಡ್ಡೆ ತೋರಿಸಿದರೆ ನೋಟೀಸ್ ಜಾರಿ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…