Categories: ಮಂಡ್ಯ

ಮಂಡ್ಯ|ಸ್ಲಮ್ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ: ಡಾ ಕುಮಾರ

ಮಂಡ್ಯ: ಇಲ್ಲಿನ ಆರ್.ಟಿ.ಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ 65 ವಸತಿ ರಹಿತ ನಿವಾಸಿಗಳಿಗೆ ಹಕ್ಕು ಪತ್ರ ತಯಾರಾಗಿದ್ದು,  ಮಂಡ್ಯ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಂಡ್ಯ ನಗರದ ಕೊಳಚೆ ಪ್ರದೇಶಗಳ ಸಮಸ್ಯೆಗಳ ಸಂಬಂಧ ಸಭೆ ನಡೆಸಿ ಅವರು ಮಾತನಾಡಿದರು.

ಹೊಸ ತಮಿಳು ಕಾಲೋನಿ ಸರ್ವೆ ನಂಬರ್ 3 ರಲ್ಲಿ 1 ಎಕರೆ 39 ಗುಂಟೆ ಘೋಷಿತ ಕೊಳಚೆ ಪ್ರದೇಶದಲ್ಲಿ 169 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ.  ಶೀಘ್ರವೆ ಫಲಾನುಭವಿಗಳ ಹೆಸರಿಗೆ ಖಾತೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೊನ್ನಯ್ಯ ಬಡಾವಣೆಯಲ್ಲಿ 113 ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದು, ಫಲಾನುಭವಿಗಳ ಹೆಸರಿಗೆ ಖಾತೆಗಳನ್ನು ಮಾಡಲಾಗುತ್ತಿದೆ. ರೈಲ್ವೆ ಹಳಿ ಪಕ್ಕದ ಬೀದಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಾಗೂ 16 ಮನೆಗಳಲ್ಲಿ ಶೌಚಾಲಯ ಇಲ್ಲದ ಕಾರಣ ಶೌಚಾಲಯವನ್ನು ನಿರ್ಮಿಸಲು ಪೈಪ್ ಲೈನ್ ಕಾಮಗಾರಿ ಮಾಡಲು ಈ ಹಿಂದೆ ತಿಳಿಸಲಾಗಿತ್ತು. ಸದರಿ ಕಾಮಗಾರಿಯು ಟೆಂಡರ್ ಹಂತದಲ್ಲಿದ್ದು, ಯಾವುದೇ ಟೆಂಡರ್ ಕಾಮಗಾರಿಯನ್ನು ವಿಳಂಬ ಮಾಡದೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಂತೆಮಾಳ ಪಕ್ಕದ ಸ್ಲಾಟರ್ ಹೌಸ್ ಘೋಷಿತ ಸ್ಲಮ್ ಜಾಗದ ಪಕ್ಕದಲ್ಲಿ ವಾಸ ಮಾಡುತ್ತಿದ್ದ ವಸತಿ ರಹಿತ 6 ಫಲಾನುಭವಿಗಳಿಗೆ ನಿವೇಶನ ನೀಡಲು ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಲು ನಗರಾಶ್ರಯ ಸಮಿತಿಯೊಂದಿಗೆ ಚರ್ಚಿಸಲಾಗುವುದು ಎಂದರು.

ಕಾಳಿಕಾಂಬ ದೇವಸ್ಥಾನದ ಹಿಂಭಾಗ ಕೊಳಚೆ ಪ್ರದೇಶದ ನಿವಾಸಿಗಳಿಗೆ ಅದೇ ಸ್ಥಳದಲ್ಲೇ 38 ಮನೆಗಳನ್ನು ಮಂಜೂರು ಮಾಡಲಾಗಿದೆ.  ಕೊಳಚೆ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ ತಡೆಯಾಜ್ಞೆ ಇದ್ದು ನ್ಯಾಯಾಲಯದ ಅಂತಿಮ ತೀರ್ಪಿನಂತೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶಿಲ್ದಾರ್ ಶಿವಕುಮಾರ್ ಬಿರಾದಾರ, ಮದ್ದೂರು ತಹಶಿಲ್ದಾರ್ ಸ್ಮಿತಾ ರಾಮ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯ ಪಾಲಕ ಅಭಿಯಂತರ ಮಹಮ್ಮದ್ ಜಫ್ರುಲ್ಲಾ, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳಾದ ಕುಮಾರ್ ಈಶ್ವರ, ನಾಗೇಂದ್ರ, ಮುಖಂಡ ಸಿದ್ಧರಾಜು ಸೇರಿದಂತೆ ಇನ್ನಿತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

32 mins ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

55 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

1 hour ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

2 hours ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

2 hours ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

2 hours ago