Categories: ಮಂಡ್ಯ

ಮಂಡ್ಯ|ಸ್ಲಮ್ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ: ಡಾ ಕುಮಾರ

ಮಂಡ್ಯ: ಇಲ್ಲಿನ ಆರ್.ಟಿ.ಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ 65 ವಸತಿ ರಹಿತ ನಿವಾಸಿಗಳಿಗೆ ಹಕ್ಕು ಪತ್ರ ತಯಾರಾಗಿದ್ದು,  ಮಂಡ್ಯ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಂಡ್ಯ ನಗರದ ಕೊಳಚೆ ಪ್ರದೇಶಗಳ ಸಮಸ್ಯೆಗಳ ಸಂಬಂಧ ಸಭೆ ನಡೆಸಿ ಅವರು ಮಾತನಾಡಿದರು.

ಹೊಸ ತಮಿಳು ಕಾಲೋನಿ ಸರ್ವೆ ನಂಬರ್ 3 ರಲ್ಲಿ 1 ಎಕರೆ 39 ಗುಂಟೆ ಘೋಷಿತ ಕೊಳಚೆ ಪ್ರದೇಶದಲ್ಲಿ 169 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ.  ಶೀಘ್ರವೆ ಫಲಾನುಭವಿಗಳ ಹೆಸರಿಗೆ ಖಾತೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೊನ್ನಯ್ಯ ಬಡಾವಣೆಯಲ್ಲಿ 113 ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದು, ಫಲಾನುಭವಿಗಳ ಹೆಸರಿಗೆ ಖಾತೆಗಳನ್ನು ಮಾಡಲಾಗುತ್ತಿದೆ. ರೈಲ್ವೆ ಹಳಿ ಪಕ್ಕದ ಬೀದಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಾಗೂ 16 ಮನೆಗಳಲ್ಲಿ ಶೌಚಾಲಯ ಇಲ್ಲದ ಕಾರಣ ಶೌಚಾಲಯವನ್ನು ನಿರ್ಮಿಸಲು ಪೈಪ್ ಲೈನ್ ಕಾಮಗಾರಿ ಮಾಡಲು ಈ ಹಿಂದೆ ತಿಳಿಸಲಾಗಿತ್ತು. ಸದರಿ ಕಾಮಗಾರಿಯು ಟೆಂಡರ್ ಹಂತದಲ್ಲಿದ್ದು, ಯಾವುದೇ ಟೆಂಡರ್ ಕಾಮಗಾರಿಯನ್ನು ವಿಳಂಬ ಮಾಡದೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಂತೆಮಾಳ ಪಕ್ಕದ ಸ್ಲಾಟರ್ ಹೌಸ್ ಘೋಷಿತ ಸ್ಲಮ್ ಜಾಗದ ಪಕ್ಕದಲ್ಲಿ ವಾಸ ಮಾಡುತ್ತಿದ್ದ ವಸತಿ ರಹಿತ 6 ಫಲಾನುಭವಿಗಳಿಗೆ ನಿವೇಶನ ನೀಡಲು ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಲು ನಗರಾಶ್ರಯ ಸಮಿತಿಯೊಂದಿಗೆ ಚರ್ಚಿಸಲಾಗುವುದು ಎಂದರು.

ಕಾಳಿಕಾಂಬ ದೇವಸ್ಥಾನದ ಹಿಂಭಾಗ ಕೊಳಚೆ ಪ್ರದೇಶದ ನಿವಾಸಿಗಳಿಗೆ ಅದೇ ಸ್ಥಳದಲ್ಲೇ 38 ಮನೆಗಳನ್ನು ಮಂಜೂರು ಮಾಡಲಾಗಿದೆ.  ಕೊಳಚೆ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ ತಡೆಯಾಜ್ಞೆ ಇದ್ದು ನ್ಯಾಯಾಲಯದ ಅಂತಿಮ ತೀರ್ಪಿನಂತೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶಿಲ್ದಾರ್ ಶಿವಕುಮಾರ್ ಬಿರಾದಾರ, ಮದ್ದೂರು ತಹಶಿಲ್ದಾರ್ ಸ್ಮಿತಾ ರಾಮ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯ ಪಾಲಕ ಅಭಿಯಂತರ ಮಹಮ್ಮದ್ ಜಫ್ರುಲ್ಲಾ, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳಾದ ಕುಮಾರ್ ಈಶ್ವರ, ನಾಗೇಂದ್ರ, ಮುಖಂಡ ಸಿದ್ಧರಾಜು ಸೇರಿದಂತೆ ಇನ್ನಿತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

27 mins ago

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

4 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

17 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

18 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

19 hours ago