ಮಂಡ್ಯ

ಮಂಡ್ಯ| ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನುಮೋದನೆ: ದಶಕಗಳ ಕನಸು ನನಸು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಬಹುಕಾಲದ ಕನಸಾಗಿದ್ದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂಲದಿಂದ ಪರಿಹಾರ ಒದಗಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶಕ್ಕೆ ಸಚಿವ ಸಂಪುಟ ಅಸ್ತು ಅಂದಿದೆ.

ಜಿಲ್ಲೆಯಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ರೈತರ ಬಹುದಿನದ ಕನಸನ್ನು ಸಾಕಾರಗೊಳಿಸಲಾಗಿದೆ.

ಈಗಾಗಲೇ ಶಿವಮೊಗ್ಗದಲ್ಲಿ 2013 ರಲ್ಲಿ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪಿಸಿ ರೈತರ ಸಮಸ್ಯೆಗಳನ್ನು ನಿವಾರಿಸುವ ಕಾರ್ಯ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಮಂಡ್ಯದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ಯಾಬಿನೆಟ್‌ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಹೊಸದಾಗಿ ಪ್ರಾರಂಭವಾಗುವ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿವಿಯಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ ಕೃಷಿ ಕಾಲೇಜು ಹಾಗೂ ಚಾಮರಾಜನಗರ ಕೃಷಿ ಕಾಲೇಜು ಸೇರ್ಪಡೆಯಾಗಲಿವೆ. ಅಲ್ಲದೇ ಶಿವಮೊಗ್ಗ ವಿಶ್ವವಿದ್ಯಾಲಯದಿಂದ ಪೊನ್ನಂಪೇಟೆ ಅರಣ್ಯ ಕಾಲೇಜು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮೈಸೂರು ತೋಟಗಾರಿಕೆ ಕಾಲೇಜು ಸೇರ್ಪಡೆಯಾಗುತ್ತಿವೆ.

ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ, ಹಾಗೂ ವಿಸ್ತರಣಾ ಘಟಕಗಳು ಮಂಡ್ಯ ವಿವಿಯಲ್ಲಿ ಪ್ರಾರಂಭವಾಗುವುದರಿಂದ ಈ ವಿಶ್ವವಿದ್ಯಾಲಯ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಯಾಗುತ್ತವೆ. ಇನ್ನೂ ಶಿವಮೊಗ್ಗ ತೋಟಗಾರಿಕೆ ಹಾಗೂ ಕೃಷಿ ವಿಶ್ವವಿದ್ಯಾಲಯ ಮಾದರಿಯಲ್ಲಿ ಆರಂಭವಾಗುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದಲ್ಲಿಯೂ ಸಹ ಎಲ್ಲಾ ಸಸ್ಯ ಶಾಸ್ತ್ರಗಳ ಸಮನ್ವಯತೆಯನ್ನು ಸಾಧಿಸುವ ಉದ್ದೇಶವನ್ನು ಹೊಂದಿದೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

20 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago