ಮಂಡ್ಯ

ಮಂಡ್ಯ| ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನುಮೋದನೆ: ದಶಕಗಳ ಕನಸು ನನಸು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಬಹುಕಾಲದ ಕನಸಾಗಿದ್ದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂಲದಿಂದ ಪರಿಹಾರ ಒದಗಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶಕ್ಕೆ ಸಚಿವ ಸಂಪುಟ ಅಸ್ತು ಅಂದಿದೆ.

ಜಿಲ್ಲೆಯಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ರೈತರ ಬಹುದಿನದ ಕನಸನ್ನು ಸಾಕಾರಗೊಳಿಸಲಾಗಿದೆ.

ಈಗಾಗಲೇ ಶಿವಮೊಗ್ಗದಲ್ಲಿ 2013 ರಲ್ಲಿ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪಿಸಿ ರೈತರ ಸಮಸ್ಯೆಗಳನ್ನು ನಿವಾರಿಸುವ ಕಾರ್ಯ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಮಂಡ್ಯದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ಯಾಬಿನೆಟ್‌ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಹೊಸದಾಗಿ ಪ್ರಾರಂಭವಾಗುವ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿವಿಯಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ ಕೃಷಿ ಕಾಲೇಜು ಹಾಗೂ ಚಾಮರಾಜನಗರ ಕೃಷಿ ಕಾಲೇಜು ಸೇರ್ಪಡೆಯಾಗಲಿವೆ. ಅಲ್ಲದೇ ಶಿವಮೊಗ್ಗ ವಿಶ್ವವಿದ್ಯಾಲಯದಿಂದ ಪೊನ್ನಂಪೇಟೆ ಅರಣ್ಯ ಕಾಲೇಜು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮೈಸೂರು ತೋಟಗಾರಿಕೆ ಕಾಲೇಜು ಸೇರ್ಪಡೆಯಾಗುತ್ತಿವೆ.

ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ, ಹಾಗೂ ವಿಸ್ತರಣಾ ಘಟಕಗಳು ಮಂಡ್ಯ ವಿವಿಯಲ್ಲಿ ಪ್ರಾರಂಭವಾಗುವುದರಿಂದ ಈ ವಿಶ್ವವಿದ್ಯಾಲಯ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಯಾಗುತ್ತವೆ. ಇನ್ನೂ ಶಿವಮೊಗ್ಗ ತೋಟಗಾರಿಕೆ ಹಾಗೂ ಕೃಷಿ ವಿಶ್ವವಿದ್ಯಾಲಯ ಮಾದರಿಯಲ್ಲಿ ಆರಂಭವಾಗುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದಲ್ಲಿಯೂ ಸಹ ಎಲ್ಲಾ ಸಸ್ಯ ಶಾಸ್ತ್ರಗಳ ಸಮನ್ವಯತೆಯನ್ನು ಸಾಧಿಸುವ ಉದ್ದೇಶವನ್ನು ಹೊಂದಿದೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago