ಮಂಡ್ಯ: ಅಂಬರೀಶ್ ಅವರ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಕೇಳಿದಾಗ ತೃಪ್ತ ಮನೋಭಾವ ಮೂಡುತ್ತದೆ ಎಂದು ಮಾಜಿ ಸಂಸದೆ ಸುಮಲತ ಅಂಬರೀಶ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿನ ಮೇಲಂತಸ್ಥಿನ ಕಟ್ಟಡಕ್ಕೆ ಅವರು ಅನುದಾನ ನೀಡಿದ ಹಿನ್ನಲೆ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಂಬರೀಶ್ ಅವರು ಸಣ್ಣ ಸಮುದಾಯ ಭವನದಿಂದ ಹಿಡಿದು ಬೃಹತ್ ಅಭಿವೃದ್ಧಿ ಕಾರ್ಯಗಳ ವರೆಗೂ ಕೆಲಸ ಮಾಡಿದ್ದಾರೆ. ಅವರ ಕೆಲಸವನ್ನು ಮುಂದುವರೆಸಿ ಅವರ ಕೆಲಸದಲ್ಲಿ ಅಸಂಪೂರ್ಣತೆಯಿದ್ದರೆ ಸಂಪೂರ್ಣಗೊಳಿಸುವ ನಿಟ್ಟಿನಲ್ಲಿ ನನ್ನ ಲೋಕಸಭಾ ಸದಸ್ಯೆ ಅವಧಿಯಲ್ಲಿ ಪ್ರಯತ್ನಗಳನ್ನು ಮಾಡಿದ್ದೇನೆ ಎಂದರು.
ಮಾಡಿದ ಕೆಲಸಗಳಲ್ಲಿ ಅಂಬರೀಶ್ ಅವರು ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಮೊದಲು ಅನುದಾನ ನೀಡಿದ್ದು, ನನ್ನ ಲೋಕಸಭಾ ಸದಸ್ಯತ್ವದ ಅವಧಿಯ ಕೊನೆಯಲ್ಲಿ ಪತ್ರಕರ್ತರ ಸಂಘವು ಸಹಾಯ ಕೋರಿ ಬಂದಾಗ ಮೇಲಂತಸ್ಥಿನ ಕಟ್ಟಡಕ್ಕೆ ಅನುದಾನ ನೀಡಿದ್ದು ಸಂತಸ ತಂದಿದೆ ಎಂದರು.
ಅಂಬರೀಶ್ ಅವರ ರೀತಿಯ ಮಾತಿನ ದಾಟಿ ದೇಶದಲ್ಲಿನ ಬೇರಾವ ರಾಜಕಾರಣಿಗೂ ಇರಲಿಲ್ಲ, ಆ ದಾಟಿಯಲ್ಲಿ ಪತ್ರಕರ್ತರೊಂದಿಗೆ ಬೇರೆ ರಾಜಕಾರಣಿ ಮಾತನಾಡಿದರೆ ಅವರ ಪ್ರತಿಕ್ರಿಯೆಯನ್ನು ಊಹೆಯೂ ಮಾಡಿಕೊಳ್ಳಲಾಗದು. ಅವರ ಮಾತಿನ ರೀತಿಯನ್ನು ಪ್ರೀತಿಯಿಂದ ಅರ್ಥ ಮಾಡಿಕೊಳ್ಳುತ್ತಿದ್ದ ಪತ್ರಕರ್ತರೊಂದಿಗೆ ಅಂಬರೀಶ್ ಅವರಿಗೆ ವಿಶೇಷವಾದ ಸಂಬಂಧವಿದೆ ಎಂದು ನುಡಿದರು.
ಅಧಿಕಾರ ಇರಲಿ ಇಲ್ಲದಿರಲಿ, ಪತ್ರಕರ್ತರ ಸಂಘಕ್ಕೆ ಕಡೆಗೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ಇದಕ್ಕೆ ಅಂಬರೀಶ್ ಅವರೊಂದಿಗೆ ಪತ್ರಕರ್ತರು ಹೊಂದಿದ್ದ ಪ್ರೀತಿ ವಿಶ್ವಾಸವನ್ನು ನಿಭಾಯಿಸಿಕೊಂಡು ಮುನ್ನಡೆಸುತ್ತೇನೆ. ನನ್ನ ಕೈಲಾದ ಸಹಕಾರವನ್ನು ಪತ್ರಕರ್ತರಿಗೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಈ ವೇಳೆ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷ ಪಿ.ಜೆ.ಚೈತನ್ಯಕುಮಾರ್, ಉಪಾಧ್ಯಕ್ಷ ನವೀನ್ಕುಮಾರ್, ಖಜಾಂಚಿ ನಂಜುಂಡಸ್ವಾಮಿ ಇತರರಿದ್ದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…