ಮಂಡ್ಯ: ಅಂಬರೀಶ್ ಅವರ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಕೇಳಿದಾಗ ತೃಪ್ತ ಮನೋಭಾವ ಮೂಡುತ್ತದೆ ಎಂದು ಮಾಜಿ ಸಂಸದೆ ಸುಮಲತ ಅಂಬರೀಶ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿನ ಮೇಲಂತಸ್ಥಿನ ಕಟ್ಟಡಕ್ಕೆ ಅವರು ಅನುದಾನ ನೀಡಿದ ಹಿನ್ನಲೆ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಂಬರೀಶ್ ಅವರು ಸಣ್ಣ ಸಮುದಾಯ ಭವನದಿಂದ ಹಿಡಿದು ಬೃಹತ್ ಅಭಿವೃದ್ಧಿ ಕಾರ್ಯಗಳ ವರೆಗೂ ಕೆಲಸ ಮಾಡಿದ್ದಾರೆ. ಅವರ ಕೆಲಸವನ್ನು ಮುಂದುವರೆಸಿ ಅವರ ಕೆಲಸದಲ್ಲಿ ಅಸಂಪೂರ್ಣತೆಯಿದ್ದರೆ ಸಂಪೂರ್ಣಗೊಳಿಸುವ ನಿಟ್ಟಿನಲ್ಲಿ ನನ್ನ ಲೋಕಸಭಾ ಸದಸ್ಯೆ ಅವಧಿಯಲ್ಲಿ ಪ್ರಯತ್ನಗಳನ್ನು ಮಾಡಿದ್ದೇನೆ ಎಂದರು.
ಮಾಡಿದ ಕೆಲಸಗಳಲ್ಲಿ ಅಂಬರೀಶ್ ಅವರು ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಮೊದಲು ಅನುದಾನ ನೀಡಿದ್ದು, ನನ್ನ ಲೋಕಸಭಾ ಸದಸ್ಯತ್ವದ ಅವಧಿಯ ಕೊನೆಯಲ್ಲಿ ಪತ್ರಕರ್ತರ ಸಂಘವು ಸಹಾಯ ಕೋರಿ ಬಂದಾಗ ಮೇಲಂತಸ್ಥಿನ ಕಟ್ಟಡಕ್ಕೆ ಅನುದಾನ ನೀಡಿದ್ದು ಸಂತಸ ತಂದಿದೆ ಎಂದರು.
ಅಂಬರೀಶ್ ಅವರ ರೀತಿಯ ಮಾತಿನ ದಾಟಿ ದೇಶದಲ್ಲಿನ ಬೇರಾವ ರಾಜಕಾರಣಿಗೂ ಇರಲಿಲ್ಲ, ಆ ದಾಟಿಯಲ್ಲಿ ಪತ್ರಕರ್ತರೊಂದಿಗೆ ಬೇರೆ ರಾಜಕಾರಣಿ ಮಾತನಾಡಿದರೆ ಅವರ ಪ್ರತಿಕ್ರಿಯೆಯನ್ನು ಊಹೆಯೂ ಮಾಡಿಕೊಳ್ಳಲಾಗದು. ಅವರ ಮಾತಿನ ರೀತಿಯನ್ನು ಪ್ರೀತಿಯಿಂದ ಅರ್ಥ ಮಾಡಿಕೊಳ್ಳುತ್ತಿದ್ದ ಪತ್ರಕರ್ತರೊಂದಿಗೆ ಅಂಬರೀಶ್ ಅವರಿಗೆ ವಿಶೇಷವಾದ ಸಂಬಂಧವಿದೆ ಎಂದು ನುಡಿದರು.
ಅಧಿಕಾರ ಇರಲಿ ಇಲ್ಲದಿರಲಿ, ಪತ್ರಕರ್ತರ ಸಂಘಕ್ಕೆ ಕಡೆಗೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ಇದಕ್ಕೆ ಅಂಬರೀಶ್ ಅವರೊಂದಿಗೆ ಪತ್ರಕರ್ತರು ಹೊಂದಿದ್ದ ಪ್ರೀತಿ ವಿಶ್ವಾಸವನ್ನು ನಿಭಾಯಿಸಿಕೊಂಡು ಮುನ್ನಡೆಸುತ್ತೇನೆ. ನನ್ನ ಕೈಲಾದ ಸಹಕಾರವನ್ನು ಪತ್ರಕರ್ತರಿಗೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಈ ವೇಳೆ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷ ಪಿ.ಜೆ.ಚೈತನ್ಯಕುಮಾರ್, ಉಪಾಧ್ಯಕ್ಷ ನವೀನ್ಕುಮಾರ್, ಖಜಾಂಚಿ ನಂಜುಂಡಸ್ವಾಮಿ ಇತರರಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…