ಮಂಡ್ಯ

ಮಂಡ್ಯ | ಜಿಲ್ಲೆಗೆ ಅಂಬರೀಶ್‌ ಕೊಡುಗೆ ಅನನ್ಯ ; ಸುಮಲತ ಅಂಬರೀಶ್‌

ಮಂಡ್ಯ: ಅಂಬರೀಶ್ ಅವರ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಕೇಳಿದಾಗ ತೃಪ್ತ ಮನೋಭಾವ ಮೂಡುತ್ತದೆ ಎಂದು ಮಾಜಿ ಸಂಸದೆ ಸುಮಲತ ಅಂಬರೀಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿನ ಮೇಲಂತಸ್ಥಿನ ಕಟ್ಟಡಕ್ಕೆ ಅವರು ಅನುದಾನ ನೀಡಿದ ಹಿನ್ನಲೆ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಅಂಬರೀಶ್ ಅವರು ಸಣ್ಣ ಸಮುದಾಯ ಭವನದಿಂದ ಹಿಡಿದು ಬೃಹತ್ ಅಭಿವೃದ್ಧಿ ಕಾರ್ಯಗಳ ವರೆಗೂ ಕೆಲಸ ಮಾಡಿದ್ದಾರೆ. ಅವರ ಕೆಲಸವನ್ನು ಮುಂದುವರೆಸಿ ಅವರ ಕೆಲಸದಲ್ಲಿ ಅಸಂಪೂರ್ಣತೆಯಿದ್ದರೆ ಸಂಪೂರ್ಣಗೊಳಿಸುವ ನಿಟ್ಟಿನಲ್ಲಿ ನನ್ನ ಲೋಕಸಭಾ ಸದಸ್ಯೆ ಅವಧಿಯಲ್ಲಿ ಪ್ರಯತ್ನಗಳನ್ನು ಮಾಡಿದ್ದೇನೆ ಎಂದರು.

ಮಾಡಿದ ಕೆಲಸಗಳಲ್ಲಿ ಅಂಬರೀಶ್ ಅವರು ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಮೊದಲು ಅನುದಾನ ನೀಡಿದ್ದು, ನನ್ನ ಲೋಕಸಭಾ ಸದಸ್ಯತ್ವದ ಅವಧಿಯ ಕೊನೆಯಲ್ಲಿ ಪತ್ರಕರ್ತರ ಸಂಘವು ಸಹಾಯ ಕೋರಿ ಬಂದಾಗ ಮೇಲಂತಸ್ಥಿನ ಕಟ್ಟಡಕ್ಕೆ ಅನುದಾನ ನೀಡಿದ್ದು ಸಂತಸ ತಂದಿದೆ ಎಂದರು.

ಅಂಬರೀಶ್ ಅವರ ರೀತಿಯ ಮಾತಿನ ದಾಟಿ ದೇಶದಲ್ಲಿನ ಬೇರಾವ ರಾಜಕಾರಣಿಗೂ ಇರಲಿಲ್ಲ, ಆ ದಾಟಿಯಲ್ಲಿ ಪತ್ರಕರ್ತರೊಂದಿಗೆ ಬೇರೆ ರಾಜಕಾರಣಿ ಮಾತನಾಡಿದರೆ ಅವರ ಪ್ರತಿಕ್ರಿಯೆಯನ್ನು ಊಹೆಯೂ ಮಾಡಿಕೊಳ್ಳಲಾಗದು. ಅವರ ಮಾತಿನ ರೀತಿಯನ್ನು ಪ್ರೀತಿಯಿಂದ ಅರ್ಥ ಮಾಡಿಕೊಳ್ಳುತ್ತಿದ್ದ ಪತ್ರಕರ್ತರೊಂದಿಗೆ ಅಂಬರೀಶ್ ಅವರಿಗೆ ವಿಶೇಷವಾದ ಸಂಬಂಧವಿದೆ ಎಂದು ನುಡಿದರು.

ಅಧಿಕಾರ ಇರಲಿ ಇಲ್ಲದಿರಲಿ, ಪತ್ರಕರ್ತರ ಸಂಘಕ್ಕೆ ಕಡೆಗೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ಇದಕ್ಕೆ ಅಂಬರೀಶ್ ಅವರೊಂದಿಗೆ ಪತ್ರಕರ್ತರು ಹೊಂದಿದ್ದ ಪ್ರೀತಿ ವಿಶ್ವಾಸವನ್ನು ನಿಭಾಯಿಸಿಕೊಂಡು ಮುನ್ನಡೆಸುತ್ತೇನೆ. ನನ್ನ ಕೈಲಾದ ಸಹಕಾರವನ್ನು ಪತ್ರಕರ್ತರಿಗೆ ನೀಡುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷ ಪಿ.ಜೆ.ಚೈತನ್ಯಕುಮಾರ್, ಉಪಾಧ್ಯಕ್ಷ ನವೀನ್‌ಕುಮಾರ್, ಖಜಾಂಚಿ ನಂಜುಂಡಸ್ವಾಮಿ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago