ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ.
ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. ಮಂಡ್ಯ ನಗರದ ವಿದ್ಯಾನಗರದ ನಿವಾಸಿಗಳಾಗಿದ್ದಾರೆ.
ಉದ್ಯಮ ಮಾಡಲು ಕಾಫೀ ಪುಡಿ ಅಂಗಡಿ ಹಾಗೂ ಚಿಕೋರಿ ಕಾರ್ಖಾನೆಯನ್ನ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದರು. ಆದರೆ ಸಾಲ ತೀರಿಸಲಾಗದ ಕಾರಣ ಕಾರ್ಖಾನೆಯನ್ನ ಬ್ಯಾಂಕ್ ವಶಕ್ಕೆ ಪಡೆದಿತ್ತು. ಹೀಗಾಗಿ ಮಂಡ್ಯ ಬಿಟ್ಟು ಮೈಸೂರಿನ ವೃದ್ದಾಶ್ರಮದಲ್ಲಿದ್ದ ದಂಪತಿಗಳು.
ಇತ್ತೀಚಿಗೆ ವೃದ್ದೆ ಮಂಡ್ಯದ ಚಿಕೋರಿ ಕಾರ್ಖಾನೆಯ ಮನೆಯಲ್ಲಿ ವಾಸವಿದ್ದರು. ದುಷ್ಕರ್ಮಿಗಳು ಟವೆಲ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ಪರಿಶೀಲನ ನಡೆಸಿದ್ದಾರೆ.
ಸದ್ಯ ಮೃತ ವೃದ್ದೆಯ ಶವವನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…
ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…