ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ.
ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. ಮಂಡ್ಯ ನಗರದ ವಿದ್ಯಾನಗರದ ನಿವಾಸಿಗಳಾಗಿದ್ದಾರೆ.
ಉದ್ಯಮ ಮಾಡಲು ಕಾಫೀ ಪುಡಿ ಅಂಗಡಿ ಹಾಗೂ ಚಿಕೋರಿ ಕಾರ್ಖಾನೆಯನ್ನ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದರು. ಆದರೆ ಸಾಲ ತೀರಿಸಲಾಗದ ಕಾರಣ ಕಾರ್ಖಾನೆಯನ್ನ ಬ್ಯಾಂಕ್ ವಶಕ್ಕೆ ಪಡೆದಿತ್ತು. ಹೀಗಾಗಿ ಮಂಡ್ಯ ಬಿಟ್ಟು ಮೈಸೂರಿನ ವೃದ್ದಾಶ್ರಮದಲ್ಲಿದ್ದ ದಂಪತಿಗಳು.
ಇತ್ತೀಚಿಗೆ ವೃದ್ದೆ ಮಂಡ್ಯದ ಚಿಕೋರಿ ಕಾರ್ಖಾನೆಯ ಮನೆಯಲ್ಲಿ ವಾಸವಿದ್ದರು. ದುಷ್ಕರ್ಮಿಗಳು ಟವೆಲ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ಪರಿಶೀಲನ ನಡೆಸಿದ್ದಾರೆ.
ಸದ್ಯ ಮೃತ ವೃದ್ದೆಯ ಶವವನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…