ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ.
ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. ಮಂಡ್ಯ ನಗರದ ವಿದ್ಯಾನಗರದ ನಿವಾಸಿಗಳಾಗಿದ್ದಾರೆ.
ಉದ್ಯಮ ಮಾಡಲು ಕಾಫೀ ಪುಡಿ ಅಂಗಡಿ ಹಾಗೂ ಚಿಕೋರಿ ಕಾರ್ಖಾನೆಯನ್ನ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದರು. ಆದರೆ ಸಾಲ ತೀರಿಸಲಾಗದ ಕಾರಣ ಕಾರ್ಖಾನೆಯನ್ನ ಬ್ಯಾಂಕ್ ವಶಕ್ಕೆ ಪಡೆದಿತ್ತು. ಹೀಗಾಗಿ ಮಂಡ್ಯ ಬಿಟ್ಟು ಮೈಸೂರಿನ ವೃದ್ದಾಶ್ರಮದಲ್ಲಿದ್ದ ದಂಪತಿಗಳು.
ಇತ್ತೀಚಿಗೆ ವೃದ್ದೆ ಮಂಡ್ಯದ ಚಿಕೋರಿ ಕಾರ್ಖಾನೆಯ ಮನೆಯಲ್ಲಿ ವಾಸವಿದ್ದರು. ದುಷ್ಕರ್ಮಿಗಳು ಟವೆಲ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ಪರಿಶೀಲನ ನಡೆಸಿದ್ದಾರೆ.
ಸದ್ಯ ಮೃತ ವೃದ್ದೆಯ ಶವವನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…