ಮಂಡ್ಯ

ಮಂಡ್ಯ: ಡಿ.9 ರಂದು ವಕ್ಫ್‌ ವಿರೋಧಿ ಸಾರ್ವಜನಿಕ ಸಭೆ

ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾರ್ವಜನಿಕ ಸಭೆಯನ್ನು ಡಿಸೆಂಬರ್ 9 ರಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ನಡೆಸಲಾಗುವ ಸಾರ್ವಜನಿಕ ಸಭೆಗೂ ಮುನ್ನ ಅಂದು ಬೆಳಿಗ್ಗೆ 11:30ಕ್ಕೆ ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.

ವಕ್ಫ್‌ನಿಂದ ರೈತರ ಕೃಷಿ ಭೂಮಿ, ಸ್ಮಶಾನ, ಸರ್ಕಾರಿ ಆಸ್ತಿ, ಮಠ ಮಂದಿರಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ದೇಶಾದ್ಯಂತ ಕಬಳಿಸಲಾಗುತ್ತಿದ್ದು, ವಕ್ಫ್‌ನ ಕಾಯ್ದೆಗೆ ತಿದ್ದುಪಡಿ ತಂದು ರೈತ, ಸಾರ್ವಜನಿಕ, ಮಠ-ಮಂದಿರ ಹಾಗೂ ಸರ್ಕಾರಿ ಆಸ್ತಿಗಳನ್ನು ರಕ್ಷಿಸಲು ಕೇಮದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸದರಿ ಸಮಸ್ಯೆ ಉಂಟಾಗಲು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ತಿದ್ದುಪಡಿ ತಂದು ವಕ್ಫ್ ಮಂಡಳಿಗೆ ಮಿತಿಮೀರಿದ ಅಧಿಕಾರ ನೀಡಿರುವುದರಿಂದಾಗಿ ೮೦೦೦ ಎಕರೆಯಷ್ಟಿದ್ದ ವಕ್ಫ್ ಭೂಮಿ ಇಂದು ೯.೪೦ ಲಕ್ಷ ಎಕರೆಗೂ ಹೆಚ್ಚು ವಿಸ್ತಾರವಾಗಿದೆ. ಅಕ್ರಮವಾಗಿ ಆಸ್ತಿ ಹೆಚ್ಚಿಸಿಕೊಳ್ಳುತ್ತಿರುವ ವಕ್ಫ್‌ಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಒಕ್ಕೂಟದ ಸದಸ್ಯ ಮತ್ತು ಬಜರಂಗ ಸೇನೆಯ ಮಂಜುನಾಥ್ ಮಾತನಾಡಿ, ವಕ್ಫ್ ಕಾಯ್ದೆ ಬಡವ, ಮಾನವೀಯ, ದೇಶ ಹಾಗೂ ಸಂವಿಧಾನ ವಿರೋಧಿಯಾಗಿದೆ. ೧೯೧೩ರಲ್ಲಿ ಬ್ರಿಟಿಷರಿಂದ ರಚನೆಯಾದ ಮುಸಲ್ಮಾನ ಮಂಡಳಿಯು ೧೯೨೩ರಲ್ಲಿ ವಕ್ಫ್ ಮಂಡಳಿಯಾಗಿ ರೂಪಾಂತರಗೊಂಡಿದ್ದು, ಇದರ ವಿರುದ್ಧ ಲಂಡನ್‌ನ ಸುಪ್ರೀಂ ನ್ಯಾಯಾಲಯದಲ್ಲಿ ಕೆಲವು ಬ್ರಿಟಿಷರೇ ದಾವೆ ಹೂಡಿದ್ದರಿಂದ ಲಂಡನ್‌ನ ಸುಪ್ರೀಂ ನ್ಯಾಯಾಲಯ ವಕ್ಫ್ ಸರ್ವಕಾಲಿಕ ಗಂಡಾಂತರ, ಇದನ್ನು ಮುಟುಕುಗೊಳಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದರು.

ಆಸ್ತಿ ಅಥವಾ ಯಾವುದೇ ರೀತಿಯ ನ್ಯಾಯಕ್ಕಾಗಿ ನ್ಯಾಯಾಲಯಗಳ ಕಡೆಗೆ ಮುಖ ಮಾಡುವುದುಂಟು ಆದರೆ ವಕ್ಫ್ ಸಂಬಂಧ ಜಮೀನಿನ ವ್ಯಾಜ್ಯಕ್ಕೆ ಸಂವಿಧಾನ ಬದ್ಧವಾಗಿ ನ್ಯಾಯಾಲಯಗಳ ಮುಂದೆ ಹಾಜರಾಗುವ ಹಕ್ಕನ್ನು ಕಸಿಯುವ ಕೆಲಸವನ್ನು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ಕಸಿದಿದೆ ಎಂದು ಆರೋಪಿಸಿದರು.

ವಕ್ಫ್‌ನಿಂದ ಅಕ್ರಮವಾಗಿ ಭೂಮಿ ವಶ ಪಡಿಸಿಕೊಳ್ಳುವ ಕಾರ್ಯ ನಿಲ್ಲಬೇಕು. ಈ ನಿಟ್ಟಿನಲ್ಲಿ ಹಾಲಿ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತರಲಿಚ್ಛಿಸುವ ತಿದ್ದುಪಡಿಗೆ ಸರ್ಕಾರ ಸಮ್ಮತಿ ಸೂಚಿಸಬೇಕು. ಅಥವಾ ಆಂದ್ರಪ್ರದೇಶ ರಾಜ್ಯದ ಮಾದರಿ ವಕ್ಫ್‌ನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕದಂಬ ಸೇನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಜಯಕರ್ನಾಟಕ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಉಮ್ಮಡಹಳ್ಳಿ ಉಮೇಶ್, ಪ್ರಕಾಶ್, ಮೋಹನ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

1 hour ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

2 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

2 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

2 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

3 hours ago