ಮಂಡ್ಯ

ಮಂಡ್ಯ: ಡಿ.9 ರಂದು ವಕ್ಫ್‌ ವಿರೋಧಿ ಸಾರ್ವಜನಿಕ ಸಭೆ

ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾರ್ವಜನಿಕ ಸಭೆಯನ್ನು ಡಿಸೆಂಬರ್ 9 ರಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ನಡೆಸಲಾಗುವ ಸಾರ್ವಜನಿಕ ಸಭೆಗೂ ಮುನ್ನ ಅಂದು ಬೆಳಿಗ್ಗೆ 11:30ಕ್ಕೆ ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.

ವಕ್ಫ್‌ನಿಂದ ರೈತರ ಕೃಷಿ ಭೂಮಿ, ಸ್ಮಶಾನ, ಸರ್ಕಾರಿ ಆಸ್ತಿ, ಮಠ ಮಂದಿರಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ದೇಶಾದ್ಯಂತ ಕಬಳಿಸಲಾಗುತ್ತಿದ್ದು, ವಕ್ಫ್‌ನ ಕಾಯ್ದೆಗೆ ತಿದ್ದುಪಡಿ ತಂದು ರೈತ, ಸಾರ್ವಜನಿಕ, ಮಠ-ಮಂದಿರ ಹಾಗೂ ಸರ್ಕಾರಿ ಆಸ್ತಿಗಳನ್ನು ರಕ್ಷಿಸಲು ಕೇಮದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸದರಿ ಸಮಸ್ಯೆ ಉಂಟಾಗಲು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ತಿದ್ದುಪಡಿ ತಂದು ವಕ್ಫ್ ಮಂಡಳಿಗೆ ಮಿತಿಮೀರಿದ ಅಧಿಕಾರ ನೀಡಿರುವುದರಿಂದಾಗಿ ೮೦೦೦ ಎಕರೆಯಷ್ಟಿದ್ದ ವಕ್ಫ್ ಭೂಮಿ ಇಂದು ೯.೪೦ ಲಕ್ಷ ಎಕರೆಗೂ ಹೆಚ್ಚು ವಿಸ್ತಾರವಾಗಿದೆ. ಅಕ್ರಮವಾಗಿ ಆಸ್ತಿ ಹೆಚ್ಚಿಸಿಕೊಳ್ಳುತ್ತಿರುವ ವಕ್ಫ್‌ಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಒಕ್ಕೂಟದ ಸದಸ್ಯ ಮತ್ತು ಬಜರಂಗ ಸೇನೆಯ ಮಂಜುನಾಥ್ ಮಾತನಾಡಿ, ವಕ್ಫ್ ಕಾಯ್ದೆ ಬಡವ, ಮಾನವೀಯ, ದೇಶ ಹಾಗೂ ಸಂವಿಧಾನ ವಿರೋಧಿಯಾಗಿದೆ. ೧೯೧೩ರಲ್ಲಿ ಬ್ರಿಟಿಷರಿಂದ ರಚನೆಯಾದ ಮುಸಲ್ಮಾನ ಮಂಡಳಿಯು ೧೯೨೩ರಲ್ಲಿ ವಕ್ಫ್ ಮಂಡಳಿಯಾಗಿ ರೂಪಾಂತರಗೊಂಡಿದ್ದು, ಇದರ ವಿರುದ್ಧ ಲಂಡನ್‌ನ ಸುಪ್ರೀಂ ನ್ಯಾಯಾಲಯದಲ್ಲಿ ಕೆಲವು ಬ್ರಿಟಿಷರೇ ದಾವೆ ಹೂಡಿದ್ದರಿಂದ ಲಂಡನ್‌ನ ಸುಪ್ರೀಂ ನ್ಯಾಯಾಲಯ ವಕ್ಫ್ ಸರ್ವಕಾಲಿಕ ಗಂಡಾಂತರ, ಇದನ್ನು ಮುಟುಕುಗೊಳಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದರು.

ಆಸ್ತಿ ಅಥವಾ ಯಾವುದೇ ರೀತಿಯ ನ್ಯಾಯಕ್ಕಾಗಿ ನ್ಯಾಯಾಲಯಗಳ ಕಡೆಗೆ ಮುಖ ಮಾಡುವುದುಂಟು ಆದರೆ ವಕ್ಫ್ ಸಂಬಂಧ ಜಮೀನಿನ ವ್ಯಾಜ್ಯಕ್ಕೆ ಸಂವಿಧಾನ ಬದ್ಧವಾಗಿ ನ್ಯಾಯಾಲಯಗಳ ಮುಂದೆ ಹಾಜರಾಗುವ ಹಕ್ಕನ್ನು ಕಸಿಯುವ ಕೆಲಸವನ್ನು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ಕಸಿದಿದೆ ಎಂದು ಆರೋಪಿಸಿದರು.

ವಕ್ಫ್‌ನಿಂದ ಅಕ್ರಮವಾಗಿ ಭೂಮಿ ವಶ ಪಡಿಸಿಕೊಳ್ಳುವ ಕಾರ್ಯ ನಿಲ್ಲಬೇಕು. ಈ ನಿಟ್ಟಿನಲ್ಲಿ ಹಾಲಿ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತರಲಿಚ್ಛಿಸುವ ತಿದ್ದುಪಡಿಗೆ ಸರ್ಕಾರ ಸಮ್ಮತಿ ಸೂಚಿಸಬೇಕು. ಅಥವಾ ಆಂದ್ರಪ್ರದೇಶ ರಾಜ್ಯದ ಮಾದರಿ ವಕ್ಫ್‌ನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕದಂಬ ಸೇನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಜಯಕರ್ನಾಟಕ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಉಮ್ಮಡಹಳ್ಳಿ ಉಮೇಶ್, ಪ್ರಕಾಶ್, ಮೋಹನ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago