ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾರ್ವಜನಿಕ ಸಭೆಯನ್ನು ಡಿಸೆಂಬರ್ 9 ರಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ನಡೆಸಲಾಗುವ ಸಾರ್ವಜನಿಕ ಸಭೆಗೂ ಮುನ್ನ ಅಂದು ಬೆಳಿಗ್ಗೆ 11:30ಕ್ಕೆ ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.
ವಕ್ಫ್ನಿಂದ ರೈತರ ಕೃಷಿ ಭೂಮಿ, ಸ್ಮಶಾನ, ಸರ್ಕಾರಿ ಆಸ್ತಿ, ಮಠ ಮಂದಿರಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ದೇಶಾದ್ಯಂತ ಕಬಳಿಸಲಾಗುತ್ತಿದ್ದು, ವಕ್ಫ್ನ ಕಾಯ್ದೆಗೆ ತಿದ್ದುಪಡಿ ತಂದು ರೈತ, ಸಾರ್ವಜನಿಕ, ಮಠ-ಮಂದಿರ ಹಾಗೂ ಸರ್ಕಾರಿ ಆಸ್ತಿಗಳನ್ನು ರಕ್ಷಿಸಲು ಕೇಮದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಸದರಿ ಸಮಸ್ಯೆ ಉಂಟಾಗಲು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ತಿದ್ದುಪಡಿ ತಂದು ವಕ್ಫ್ ಮಂಡಳಿಗೆ ಮಿತಿಮೀರಿದ ಅಧಿಕಾರ ನೀಡಿರುವುದರಿಂದಾಗಿ ೮೦೦೦ ಎಕರೆಯಷ್ಟಿದ್ದ ವಕ್ಫ್ ಭೂಮಿ ಇಂದು ೯.೪೦ ಲಕ್ಷ ಎಕರೆಗೂ ಹೆಚ್ಚು ವಿಸ್ತಾರವಾಗಿದೆ. ಅಕ್ರಮವಾಗಿ ಆಸ್ತಿ ಹೆಚ್ಚಿಸಿಕೊಳ್ಳುತ್ತಿರುವ ವಕ್ಫ್ಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಒಕ್ಕೂಟದ ಸದಸ್ಯ ಮತ್ತು ಬಜರಂಗ ಸೇನೆಯ ಮಂಜುನಾಥ್ ಮಾತನಾಡಿ, ವಕ್ಫ್ ಕಾಯ್ದೆ ಬಡವ, ಮಾನವೀಯ, ದೇಶ ಹಾಗೂ ಸಂವಿಧಾನ ವಿರೋಧಿಯಾಗಿದೆ. ೧೯೧೩ರಲ್ಲಿ ಬ್ರಿಟಿಷರಿಂದ ರಚನೆಯಾದ ಮುಸಲ್ಮಾನ ಮಂಡಳಿಯು ೧೯೨೩ರಲ್ಲಿ ವಕ್ಫ್ ಮಂಡಳಿಯಾಗಿ ರೂಪಾಂತರಗೊಂಡಿದ್ದು, ಇದರ ವಿರುದ್ಧ ಲಂಡನ್ನ ಸುಪ್ರೀಂ ನ್ಯಾಯಾಲಯದಲ್ಲಿ ಕೆಲವು ಬ್ರಿಟಿಷರೇ ದಾವೆ ಹೂಡಿದ್ದರಿಂದ ಲಂಡನ್ನ ಸುಪ್ರೀಂ ನ್ಯಾಯಾಲಯ ವಕ್ಫ್ ಸರ್ವಕಾಲಿಕ ಗಂಡಾಂತರ, ಇದನ್ನು ಮುಟುಕುಗೊಳಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದರು.
ಆಸ್ತಿ ಅಥವಾ ಯಾವುದೇ ರೀತಿಯ ನ್ಯಾಯಕ್ಕಾಗಿ ನ್ಯಾಯಾಲಯಗಳ ಕಡೆಗೆ ಮುಖ ಮಾಡುವುದುಂಟು ಆದರೆ ವಕ್ಫ್ ಸಂಬಂಧ ಜಮೀನಿನ ವ್ಯಾಜ್ಯಕ್ಕೆ ಸಂವಿಧಾನ ಬದ್ಧವಾಗಿ ನ್ಯಾಯಾಲಯಗಳ ಮುಂದೆ ಹಾಜರಾಗುವ ಹಕ್ಕನ್ನು ಕಸಿಯುವ ಕೆಲಸವನ್ನು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ಕಸಿದಿದೆ ಎಂದು ಆರೋಪಿಸಿದರು.
ವಕ್ಫ್ನಿಂದ ಅಕ್ರಮವಾಗಿ ಭೂಮಿ ವಶ ಪಡಿಸಿಕೊಳ್ಳುವ ಕಾರ್ಯ ನಿಲ್ಲಬೇಕು. ಈ ನಿಟ್ಟಿನಲ್ಲಿ ಹಾಲಿ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತರಲಿಚ್ಛಿಸುವ ತಿದ್ದುಪಡಿಗೆ ಸರ್ಕಾರ ಸಮ್ಮತಿ ಸೂಚಿಸಬೇಕು. ಅಥವಾ ಆಂದ್ರಪ್ರದೇಶ ರಾಜ್ಯದ ಮಾದರಿ ವಕ್ಫ್ನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಕದಂಬ ಸೇನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಜಯಕರ್ನಾಟಕ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಉಮ್ಮಡಹಳ್ಳಿ ಉಮೇಶ್, ಪ್ರಕಾಶ್, ಮೋಹನ್ ಇದ್ದರು.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…