ಮಂಡ್ಯ

ಮಂಡ್ಯ: ಬಿಜೆಪಿ ಸದಸ್ಯತ್ವ ನೋಂದಾಣಿಗೆ ಮನವಿ

ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್‌ಕುಮಾರ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಜನರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ, ಆದ್ದರಿಂದ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಆಸಕ್ತ ಜನತೆ ಪಕ್ಷಕ್ಕೆ ಸೇರ್ಪಡೆಗೊಂಡು ಅಭಿವೃದ್ಧಿಗೆ ಸಹಕರಿಸಬೇಕೆಂದು ಕೇಳಿಕೊಂಡರು.

ರಾಜ್ಯದಲ್ಲಿ ೧೫ ಹಾಲು ಒಕ್ಕೂಟಗಳಿದ್ದು, ೨೬.೮೯ ಲಕ್ಷ ಹಾಲು ಉತ್ಪಾದಕರಿದ್ದು, ೫೦ ಲಕ್ಷ ಹಾಲು ಉತ್ಪಾದನೆಯಾಗುತ್ತಿದ್ದು, ೭೦ ಉಪ ಉತ್ಪನ್ನಗಳನ್ನು ಮಾಡುತ್ತಿದ್ದು, ಒಕ್ಕೂಟಗಳು ಹಾಲು ಉತ್ಪಾದಕರಿಗೆ ಲೀಟರ್‌ಗೆ ನೀಡುವ ಹಣದಲ್ಲಿ ೧ ರಿಂದ ೨ ರೂ ಕಡಿತಗೊಳಿಸುತ್ತಿದ್ದು, ರಾಜಕೀಯ ಪ್ರೇರಿತ ಆಡಳಿತ ಮಂಡಳಿ, ಸ್ಪರ್ಧಾತ್ಮಕ ಮನೋಭಾವ ಇಲ್ಲದಿರುವುದು, ಮಾರುಕಟ್ಟೆಯಲ್ಲಿ ಅಸ್ಥಿತ್ವ ಉಳಿಸಕೊಳ್ಳುವಲ್ಲಿ ಪ್ರಯತ್ನ ನಡೆಯದ ಕಾರಣ ಹಾಲು ಉತ್ಪಾದಕರಿಗೆ ಹೊರೆ ಹೇರಲಾಗುತ್ತಿದ್ದು, ಒಕ್ಕೂಟಗಳು ಭ್ರಷ್ಠಾಚಾರದ ಕೂಪಗಳಾಗಿವೆ ಎಂದು ದೂಡಿದರು.

೨೦೨೩ರಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ೨ ರೂ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿ ಇಂದಿಗೂ ಭರವಸೆ ಇಡೇರಿಸಿಲ್ಲ,೨೦೨೪ರ ಮೇ ಮಾಹೆಯಿಂದ ರೈತರಿಗೆ ನೀಡಬೇಕಾದ ೫ ರೂ ಪ್ರೋತ್ಸಾಹ ಹಣವನ್ನು ನೀಡಿಲ್ಲ, ಇಂದು ಒಂದು ಲೀಟರ್ ಹಾಲು ಉತ್ಪಾದನೆ ಮಾಡಲು ೨೬-೨೮ ರೂ ಖರ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕಾಳಜಿ ವಹಿಸದ ಸರ್ಕಾರದ ಕ್ರಮವನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ರೈತ ಮೋಚಾ ಜಿಲ್ಲಾಧ್ಯಕ್ಷ ಅಶೊಕ್ ಜಯರಾಂ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನ ಇಂದು ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ೫೦ ಮಂದಿ ಸಕ್ರಿಯ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದರೆ, ಅಭಿಯಾನ ಒಂದು ವಾರದ ಕಾಲ ನಡೆಯಲಿದ್ದು, ಅಂತ್ಯದ ವೇಳೆಗೆ ಜಿಲ್ಲೆಯಿಂದ ೨ ಲಕ್ಷ ಮಂದಿ ನೊಂದಣಿ ಮಾಡಿಸಿಕೊಳ್ಳುವ ನಿರೀಕ್ಷೆಯನ್ನು ಹೊಂದಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಜವರೇಗೌಡ, ಜಿಲ್ಲಾ ಕಾರ್ಯದರ್ಶಿ ವೈರಮುಡಿಗೌಡ, ಜೋಗಿಗೌಡ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

4 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

4 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

4 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago