ಮಂಡ್ಯ

ಮಂಡ್ಯ: ಬಿಜೆಪಿ ಸದಸ್ಯತ್ವ ನೋಂದಾಣಿಗೆ ಮನವಿ

ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್‌ಕುಮಾರ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಜನರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ, ಆದ್ದರಿಂದ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಆಸಕ್ತ ಜನತೆ ಪಕ್ಷಕ್ಕೆ ಸೇರ್ಪಡೆಗೊಂಡು ಅಭಿವೃದ್ಧಿಗೆ ಸಹಕರಿಸಬೇಕೆಂದು ಕೇಳಿಕೊಂಡರು.

ರಾಜ್ಯದಲ್ಲಿ ೧೫ ಹಾಲು ಒಕ್ಕೂಟಗಳಿದ್ದು, ೨೬.೮೯ ಲಕ್ಷ ಹಾಲು ಉತ್ಪಾದಕರಿದ್ದು, ೫೦ ಲಕ್ಷ ಹಾಲು ಉತ್ಪಾದನೆಯಾಗುತ್ತಿದ್ದು, ೭೦ ಉಪ ಉತ್ಪನ್ನಗಳನ್ನು ಮಾಡುತ್ತಿದ್ದು, ಒಕ್ಕೂಟಗಳು ಹಾಲು ಉತ್ಪಾದಕರಿಗೆ ಲೀಟರ್‌ಗೆ ನೀಡುವ ಹಣದಲ್ಲಿ ೧ ರಿಂದ ೨ ರೂ ಕಡಿತಗೊಳಿಸುತ್ತಿದ್ದು, ರಾಜಕೀಯ ಪ್ರೇರಿತ ಆಡಳಿತ ಮಂಡಳಿ, ಸ್ಪರ್ಧಾತ್ಮಕ ಮನೋಭಾವ ಇಲ್ಲದಿರುವುದು, ಮಾರುಕಟ್ಟೆಯಲ್ಲಿ ಅಸ್ಥಿತ್ವ ಉಳಿಸಕೊಳ್ಳುವಲ್ಲಿ ಪ್ರಯತ್ನ ನಡೆಯದ ಕಾರಣ ಹಾಲು ಉತ್ಪಾದಕರಿಗೆ ಹೊರೆ ಹೇರಲಾಗುತ್ತಿದ್ದು, ಒಕ್ಕೂಟಗಳು ಭ್ರಷ್ಠಾಚಾರದ ಕೂಪಗಳಾಗಿವೆ ಎಂದು ದೂಡಿದರು.

೨೦೨೩ರಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ೨ ರೂ ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿ ಇಂದಿಗೂ ಭರವಸೆ ಇಡೇರಿಸಿಲ್ಲ,೨೦೨೪ರ ಮೇ ಮಾಹೆಯಿಂದ ರೈತರಿಗೆ ನೀಡಬೇಕಾದ ೫ ರೂ ಪ್ರೋತ್ಸಾಹ ಹಣವನ್ನು ನೀಡಿಲ್ಲ, ಇಂದು ಒಂದು ಲೀಟರ್ ಹಾಲು ಉತ್ಪಾದನೆ ಮಾಡಲು ೨೬-೨೮ ರೂ ಖರ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕಾಳಜಿ ವಹಿಸದ ಸರ್ಕಾರದ ಕ್ರಮವನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ರೈತ ಮೋಚಾ ಜಿಲ್ಲಾಧ್ಯಕ್ಷ ಅಶೊಕ್ ಜಯರಾಂ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನ ಇಂದು ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ೫೦ ಮಂದಿ ಸಕ್ರಿಯ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದರೆ, ಅಭಿಯಾನ ಒಂದು ವಾರದ ಕಾಲ ನಡೆಯಲಿದ್ದು, ಅಂತ್ಯದ ವೇಳೆಗೆ ಜಿಲ್ಲೆಯಿಂದ ೨ ಲಕ್ಷ ಮಂದಿ ನೊಂದಣಿ ಮಾಡಿಸಿಕೊಳ್ಳುವ ನಿರೀಕ್ಷೆಯನ್ನು ಹೊಂದಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಜವರೇಗೌಡ, ಜಿಲ್ಲಾ ಕಾರ್ಯದರ್ಶಿ ವೈರಮುಡಿಗೌಡ, ಜೋಗಿಗೌಡ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago