ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಎಂಬುದನ್ನೂ ನೋಡದೆ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೇಗೌಡ ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗ ನೀಲೇಗೌಡ ಹಾಗೂ ಆತನ ಪತ್ನಿ ಕೀರ್ತಿ ಎಂಬುವವರು ತಮಗೆ ಆಸ್ತಿ ಪಾಲಾಗಿ ಬಂದ ನಂತರವೂ ಜೀವನ ನಿರ್ವಹಣೆಗೆ ಉಳಿಸಿಕೊಂಡ ಆಸ್ತಿಯೂ ತಮಗೇ ಬೇಕೆಂದು ಕಿರುಕುಳ ನೀಡುತ್ತಿದ್ದರು. ನವೆಂಬರ್ ತಿಂಗಳ ೧೭ರಂದು ಮಾರಣಾಂತಿಕ ಹಲ್ಲೆ ಮಾಡಿದ್ದರು ಎಂದರು.
ಹಲ್ಲೆಯಿಂದ ನನಗೆ ಕೈಮುರಿದಿದ್ದು, ತೀವ್ರ ತರನಾದ ಗಾಯಗಳಾಗಿವೆ, ಪತ್ನಿ ಭಾಗ್ಯಮ್ಮಗೆ ಕಾಲು ಮುರಿದಿದ್ದು, ಎದ್ದು ಓಡಾಡದ ಸ್ಥಿತಿಯಲ್ಲಿದ್ದಾರೆ. ಈ ಸಂಬಂದ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ದೂರನ್ನು ಬದಲಿಸಿ ಕೊಡುವಂತೆ ಒತ್ತಡ ಹೇರಿ ಅನ್ಯಾಯ ಎಸಗಲಾಗುತ್ತಿದೆ ಎಂದು ಹೇಳಿದರು.
ಹಲ್ಲೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರೆ, ಪೊಲೀಸರು ದೂರಿನಲ್ಲಿ ಮಾರಣಾಂತಿಕ ಹಲ್ಲೆ ಎಂಬುದನ್ನ ಬದಲಿಸಿ, ನೀಲೇಗೌಡನ ಮಾವ ಮತ್ತಿತರರ ಹೆಸರನ್ನು ತೆಗೆದು ದೂರು ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು.
ಪ್ರಕರಣ ಸಂಬಂಧ ನ್ಯಾಯ ಒದಗಿಸಬೇಕೆಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಲ್ಲಿ ಮನವಿ ಮಾಡಿದ್ದು, ನ್ಯಾಯ ಒದಗಿಸಲಾಗದಿದ್ದರೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಪುತ್ರಿ ವರಲಕ್ಷ್ಮಿ, ವಕೀಲೆ ಸಲ್ಮ ಇತರರು ಇದ್ದರು.
ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…
ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…
ರಾತ್ರಿ ಪಾಳಿಯಲ್ಲಿ ನರ್ಸ್ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…
ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…
ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…
ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…