ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಎಂಬುದನ್ನೂ ನೋಡದೆ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೇಗೌಡ ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗ ನೀಲೇಗೌಡ ಹಾಗೂ ಆತನ ಪತ್ನಿ ಕೀರ್ತಿ ಎಂಬುವವರು ತಮಗೆ ಆಸ್ತಿ ಪಾಲಾಗಿ ಬಂದ ನಂತರವೂ ಜೀವನ ನಿರ್ವಹಣೆಗೆ ಉಳಿಸಿಕೊಂಡ ಆಸ್ತಿಯೂ ತಮಗೇ ಬೇಕೆಂದು ಕಿರುಕುಳ ನೀಡುತ್ತಿದ್ದರು. ನವೆಂಬರ್ ತಿಂಗಳ ೧೭ರಂದು ಮಾರಣಾಂತಿಕ ಹಲ್ಲೆ ಮಾಡಿದ್ದರು ಎಂದರು.
ಹಲ್ಲೆಯಿಂದ ನನಗೆ ಕೈಮುರಿದಿದ್ದು, ತೀವ್ರ ತರನಾದ ಗಾಯಗಳಾಗಿವೆ, ಪತ್ನಿ ಭಾಗ್ಯಮ್ಮಗೆ ಕಾಲು ಮುರಿದಿದ್ದು, ಎದ್ದು ಓಡಾಡದ ಸ್ಥಿತಿಯಲ್ಲಿದ್ದಾರೆ. ಈ ಸಂಬಂದ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ದೂರನ್ನು ಬದಲಿಸಿ ಕೊಡುವಂತೆ ಒತ್ತಡ ಹೇರಿ ಅನ್ಯಾಯ ಎಸಗಲಾಗುತ್ತಿದೆ ಎಂದು ಹೇಳಿದರು.
ಹಲ್ಲೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರೆ, ಪೊಲೀಸರು ದೂರಿನಲ್ಲಿ ಮಾರಣಾಂತಿಕ ಹಲ್ಲೆ ಎಂಬುದನ್ನ ಬದಲಿಸಿ, ನೀಲೇಗೌಡನ ಮಾವ ಮತ್ತಿತರರ ಹೆಸರನ್ನು ತೆಗೆದು ದೂರು ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು.
ಪ್ರಕರಣ ಸಂಬಂಧ ನ್ಯಾಯ ಒದಗಿಸಬೇಕೆಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಲ್ಲಿ ಮನವಿ ಮಾಡಿದ್ದು, ನ್ಯಾಯ ಒದಗಿಸಲಾಗದಿದ್ದರೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಪುತ್ರಿ ವರಲಕ್ಷ್ಮಿ, ವಕೀಲೆ ಸಲ್ಮ ಇತರರು ಇದ್ದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…