ಮಂಡ್ಯ

ಮಂಡ್ಯ:ಸಚಿವ ಎಂ.ಬಿ ಪಾಟೀಲ್‌ ಬಹಿರಂಗ ಕ್ಷಮೆಯಾಚಿಸಲು ಬಿಜೆಪಿ ಎಸ್‌ಸಿ ಮೋರ್ಚ ಆಗ್ರಹ

ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ ಆಗ್ರಹಿಸಿದ್ದಾರೆ.

ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ನಿರ್ಭೀತಿಯಿಂದ ನೇರಾನೇರ ಪ್ರಶ್ನಿಸುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಸಚಿವರಾದ ಪ್ರಿಯಾಂಕ ಖರ್ಗೆ ಮತ್ತು ಎಂಬಿ ಪಾಟೀಲ್ ಅವರು ಅಪಮಾನಕರವಾಗಿ ನಿಂದನೆ ಮಾಡುತ್ತಿರುವುದು ಖಂಡನೀಯ ಎಂದರು.

ಈ ಹಿಂದೆ ಕೆ ಐ ಎ ಡಿ ಬಿ ವತಿಯಿಂದ ಸೈಟನ್ನು ಅಲಾಟ್ ಮಾಡಲಾಗಿದೆ. ಸಿ ಎ ಸೈಟ್ ಪಡೆಯಲು 283 ಅರ್ಜಿ ಹೋಗಿದ್ದು ,ಆದರೆ ತರಾತುರಿಯಲ್ಲಿ ಒಂದು ತಿಂಗಳೊಳಗೆ 193 ಸೈಟುಗಳನ್ನು ವಿತರಿಸಲಾಗಿದೆ ಎಂದು ದೂರಿದರು.

ಈ ಬಗ್ಗೆ ನಾರಾಯಣಸ್ವಾಮಿ ಅವರು ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ ಇದನ್ನೇ ಮುಂದಿಟ್ಟುಕೊಂಡು ಅವಮಾನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ದಲಿತ ,ವಂಚಿತ ಮತ್ತು ಪೀಡಿತ ಜನರಿಗೆ ಸಾಮಾಜಿಕ ನ್ಯಾಯ ಕೊಡಿಸುವ ಬದಲು ದಲಿತರ ಹೆಸರಿನಲ್ಲಿ ಸರ್ವವನ್ನು ಬಾಚಿಕೊಂಡು ತಮ್ಮ ಕುಟುಂಬ ಭದ್ರ ಪಡಿಸಿಕೊಳ್ಳುವ ಖರ್ಗೆ ಕುಟುಂಬಕ್ಕೂ ನ್ಯೂನ್ಯತೆಗಳನ್ನು ಎತ್ತಿ ಹಿಡಿದು ತಳ ಸಮುದಾಯಗಳಿಗೆ ನ್ಯಾಯ ಕೊಡಿಸಲು ಹೋರಾಡುತ್ತಿರುವ ಚಲವಾದಿ ನಾರಾಯಣಸ್ವಾಮಿ ಅವರಿಗೂ ಯಾವ ಹೋಲಿಕೆ ಇದೆ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರದ ವಿರುದ್ಧ ಸೊಲ್ಲೆತ್ತಿದರೆ ಭ್ರಷ್ಟರೆಲ್ಲ ಸೇರಿ ನಾರಾಯಣಸ್ವಾಮಿ ಅವರನ್ನು ಕೀಳು ಮಟ್ಟದ ಭಾಷೆ ಬಳಸಿ ನಿಂದಿಸುತ್ತಿದ್ದಾರೆ. ತಪ್ಪೇ ಮಾಡದೆ ನ್ಯಾಯದ ಪರವಾಗಿರುವ ಅವರನ್ನು ಅಪಮಾನಿಸಿ ತೇಜೊವಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಸಚಿವ ಎಂ ಬಿ ಪಾಟೀಲ್ ಅವರು ನಾರಾಯಣಸ್ವಾಮಿ ಅವರನ್ನು ಶೆಡ್ ಗಿರಾಕಿ ಎಂದು ಟೀಕಿಸಿದ್ದಾರೆ. ಆದರೆ ಎಂಬಿ ಪಾಟೀಲ್ ಅವರೇ ಲೊಡ್ದು ಗಿರಾಕಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೂಡಲೇ ಸಚಿವ ಎಂಬಿ ಪಾಟೀಲ್ ಅವರು ನಾರಾಯಣಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಟಿ ಜಿ ಶಂಕರ್, ಜಿಲ್ಲಾ ವಕ್ತಾರ ಸಿಟಿ ಮಂಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂಎಸ್ ಧರಣಿಂದ್ರ, ಕೆಆರ್ ನಿತ್ಯಾನಂದ ,ಜಿಡಿ ಯೋಗೇಶ್ ಸೇರಿದಂತೆ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

3 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

6 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

7 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

8 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

8 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

9 hours ago