ಮಂಡ್ಯ

ಮಂಡ್ಯ:ಸಚಿವ ಎಂ.ಬಿ ಪಾಟೀಲ್‌ ಬಹಿರಂಗ ಕ್ಷಮೆಯಾಚಿಸಲು ಬಿಜೆಪಿ ಎಸ್‌ಸಿ ಮೋರ್ಚ ಆಗ್ರಹ

ಮಂಡ್ಯ : ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಎಂಬಿ ಪಾಟೀಲ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಎಸ್ ಸಿ ಮೋರ್ಚ ರಾಜ್ಯ ಕಾರ್ಯದರ್ಶಿ ಎಂ ಎಸ್ ಪರಮಾನಂದ ಆಗ್ರಹಿಸಿದ್ದಾರೆ.

ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ನಿರ್ಭೀತಿಯಿಂದ ನೇರಾನೇರ ಪ್ರಶ್ನಿಸುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಸಚಿವರಾದ ಪ್ರಿಯಾಂಕ ಖರ್ಗೆ ಮತ್ತು ಎಂಬಿ ಪಾಟೀಲ್ ಅವರು ಅಪಮಾನಕರವಾಗಿ ನಿಂದನೆ ಮಾಡುತ್ತಿರುವುದು ಖಂಡನೀಯ ಎಂದರು.

ಈ ಹಿಂದೆ ಕೆ ಐ ಎ ಡಿ ಬಿ ವತಿಯಿಂದ ಸೈಟನ್ನು ಅಲಾಟ್ ಮಾಡಲಾಗಿದೆ. ಸಿ ಎ ಸೈಟ್ ಪಡೆಯಲು 283 ಅರ್ಜಿ ಹೋಗಿದ್ದು ,ಆದರೆ ತರಾತುರಿಯಲ್ಲಿ ಒಂದು ತಿಂಗಳೊಳಗೆ 193 ಸೈಟುಗಳನ್ನು ವಿತರಿಸಲಾಗಿದೆ ಎಂದು ದೂರಿದರು.

ಈ ಬಗ್ಗೆ ನಾರಾಯಣಸ್ವಾಮಿ ಅವರು ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ ಇದನ್ನೇ ಮುಂದಿಟ್ಟುಕೊಂಡು ಅವಮಾನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ದಲಿತ ,ವಂಚಿತ ಮತ್ತು ಪೀಡಿತ ಜನರಿಗೆ ಸಾಮಾಜಿಕ ನ್ಯಾಯ ಕೊಡಿಸುವ ಬದಲು ದಲಿತರ ಹೆಸರಿನಲ್ಲಿ ಸರ್ವವನ್ನು ಬಾಚಿಕೊಂಡು ತಮ್ಮ ಕುಟುಂಬ ಭದ್ರ ಪಡಿಸಿಕೊಳ್ಳುವ ಖರ್ಗೆ ಕುಟುಂಬಕ್ಕೂ ನ್ಯೂನ್ಯತೆಗಳನ್ನು ಎತ್ತಿ ಹಿಡಿದು ತಳ ಸಮುದಾಯಗಳಿಗೆ ನ್ಯಾಯ ಕೊಡಿಸಲು ಹೋರಾಡುತ್ತಿರುವ ಚಲವಾದಿ ನಾರಾಯಣಸ್ವಾಮಿ ಅವರಿಗೂ ಯಾವ ಹೋಲಿಕೆ ಇದೆ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರದ ವಿರುದ್ಧ ಸೊಲ್ಲೆತ್ತಿದರೆ ಭ್ರಷ್ಟರೆಲ್ಲ ಸೇರಿ ನಾರಾಯಣಸ್ವಾಮಿ ಅವರನ್ನು ಕೀಳು ಮಟ್ಟದ ಭಾಷೆ ಬಳಸಿ ನಿಂದಿಸುತ್ತಿದ್ದಾರೆ. ತಪ್ಪೇ ಮಾಡದೆ ನ್ಯಾಯದ ಪರವಾಗಿರುವ ಅವರನ್ನು ಅಪಮಾನಿಸಿ ತೇಜೊವಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಸಚಿವ ಎಂ ಬಿ ಪಾಟೀಲ್ ಅವರು ನಾರಾಯಣಸ್ವಾಮಿ ಅವರನ್ನು ಶೆಡ್ ಗಿರಾಕಿ ಎಂದು ಟೀಕಿಸಿದ್ದಾರೆ. ಆದರೆ ಎಂಬಿ ಪಾಟೀಲ್ ಅವರೇ ಲೊಡ್ದು ಗಿರಾಕಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೂಡಲೇ ಸಚಿವ ಎಂಬಿ ಪಾಟೀಲ್ ಅವರು ನಾರಾಯಣಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಟಿ ಜಿ ಶಂಕರ್, ಜಿಲ್ಲಾ ವಕ್ತಾರ ಸಿಟಿ ಮಂಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂಎಸ್ ಧರಣಿಂದ್ರ, ಕೆಆರ್ ನಿತ್ಯಾನಂದ ,ಜಿಡಿ ಯೋಗೇಶ್ ಸೇರಿದಂತೆ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago