ಮಂಡ್ಯ: ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಗುರುವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್ಗೌಡ (11) ಮೃತ ವಿದ್ಯಾರ್ಥಿ.
ಲೇಖನ್ಗೌಡ ರಜೆಯ ನಿಮಿತ್ತ ತಮ್ಮ ಸ್ವಗ್ರಾಮ ಬಿಳಿದೇಗಲು ಗ್ರಾಮಕ್ಕೆ ಬಂದಿದ್ದು, ಕಾರ್ಯನಿಮಿತ್ತ ತನ್ನ ತಾತ ಕುಳ್ಳೇಗೌಡನ ಜೊತೆ ಮಂಡ್ಯ ನಗರಕ್ಕೆ ಟಿವಿಎಸ್ ಮೊಪೆಡ್ನಲ್ಲಿ ಬಂದಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದಾಗ ಅಕ್ಕಿ ತುಂಬಿದ ಲಾರಿ ನಗರಸಭೆ ಎದುರು ಹಿಂಬದಿಯಿಂದ ಟಿವಿಎಸ್ ಮೊಪೆಡ್ಗೆ ಡಿಕ್ಕಿ ಹೊಡೆದಿದೆ.ಈ ಸಂದರ್ಭ ತಾತ ಕುಳ್ಳೇಗೌಡ ಅವರು ಎಡಬದಿಗೆ ಬಿದ್ದರೆ, ಲೇಖನ್ಗೌಡ ಬೆಂಗಳೂರು-ಮೈಸೂರು ಹೆದ್ದಾರಿಗೆ ಬಿದ್ದಾಗ ಲಾರಿಯ ಹಿಂಬದಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟನು.
ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಂಚಾರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿ ಲಾರಿಯನ್ನು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಕುಳ್ಳೇಗೌಡ ಅವರನ್ನು ಮಿಮ್ಸ್ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…