ಮಂಡ್ಯ: ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಗಸ್ಟ್ 15ರಂದು ಭಗವಾನ್ ಗೌತಮ ಬುದ್ಧರ ಪ್ರತಿಮೆ ಅನಾವರಣ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ಬೆಳಿಗ್ಗೆ 11:30 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗೌತಮ ಬುದ್ಧರ ಪ್ರತಿಮೆಯನ್ನು ತೆರೆದ ಬೆಳ್ಳಿರಥದಲ್ಲಿ ಇರಿಸಿ ಬುದ್ಧರಿಗೆ ಪುಷ್ಪಾರ್ಚನೆ ಮಾಡಿ ನಂತರ ಶ್ರೀರಂಗಪಟ್ಟಣ ತಾಲೂಕಿನ ನೇರಲಕೆರೆಗೆ ಬುದ್ದನ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.
ಅಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಗೌತಮ ಬುದ್ಧರ ರಥಕ್ಕೆ ಚಾಲನೆ ನೀಡಲಿದ್ದು ಮಂಡ್ಯದ ಶಾಸಕ ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ .ಜೊತೆಗೆ ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಮನೋರಕಿತ ಬಂತೇಜಿ, ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ, ಪ್ರೊಫೆಸರ್ ಮಹೇಶ್ ಚಂದ್ರಗುರು,ಪ್ರೊಫೆಸರ್ ಕೆಎಸ್ ಭಗವಾನ್, ನಿವೃತ್ತ ಪೊಲೀಸ್ ಅಧಿಕಾರಿ ಡಾಕ್ಟರ್ ಸುಭಾಷ್ ಭರಣಿ, ಜ್ಞಾನ ಪ್ರಕಾಶ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಅವರು 2500 ವರ್ಷಗಳ ಹಿಂದೆ ಇತಿಹಾಸದಲ್ಲಿ ಮರೆತು ಹೋಗಿದ್ದ ಈ ನೆಲದ ಸಾಕ್ಷಿ ಪ್ರಜ್ಞೆ ಮತ್ತು ವೈಜ್ಞಾನಿಕ ಚಿಂತಕ ಭಗವಾನ್ ಗೌತಮ ಬುದ್ಧ ಅವರನ್ನು ಪರಿಚಯಿಸಿದ್ದಾರೆ. ಅಕ್ಟೋಬರ್ 14 ,1956 ರಂದು ಇತಿಹಾಸ ಪ್ರಸಿದ್ಧ ಮಹರಾಷ್ಟ್ರದ ನಾಗಪುರ ದೀಕ್ಷ ಭೂಮಿಯಲ್ಲಿ ತಮ್ಮ 10 ಲಕ್ಷ ಅನುಯಾಯಿಗಳೊಂದಿಗೆ ಅಂಬೇಡ್ಕರ್ ಅವರು ಬೌದ್ಧ ಧಮ್ಮ ದೀಕ್ಷೆ ಪಡೆದುಕೊಂಡಿದ್ದು ಇದು ನವ ಬೌದ್ಧರು ಹುಟ್ಟಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬುದ್ಧ ಭಾರತ ಫೌಂಡೇಶನ್ ಅಧ್ಯಕ್ಷ ಜೆ ರಾಮಯ್ಯ, ಅಂಬೇಡ್ಕರ್ ವಾರಿಯರ್ ಸಂಘಟನೆಯ ಅಧ್ಯಕ್ಷ ಗಂಗರಾಜು, ಥಾಮಸ್ ,ಮೋಹನ್ ಕುಮಾರ್, ಜವರಪ್ಪ, ಲಾರೆನ್ಸ್, ವೇಣುಗೋಪಾಲ್ ಉಪಸ್ಥಿತರಿದ್ದರು.
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…
ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…
ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…
ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್ ಮತ್ತು…