ಮಂಡ್ಯ

ಮಂಡ್ಯ| ಆಗಸ್ಟ್‌ 15 ಕ್ಕೆ ಬುದ್ಧ ಪ್ರತಿಮೆ ಅನಾವರಣ

ಮಂಡ್ಯ: ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಗಸ್ಟ್ 15ರಂದು ಭಗವಾನ್ ಗೌತಮ ಬುದ್ಧರ ಪ್ರತಿಮೆ ಅನಾವರಣ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ಬೆಳಿಗ್ಗೆ 11:30 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗೌತಮ ಬುದ್ಧರ ಪ್ರತಿಮೆಯನ್ನು ತೆರೆದ ಬೆಳ್ಳಿರಥದಲ್ಲಿ ಇರಿಸಿ ಬುದ್ಧರಿಗೆ ಪುಷ್ಪಾರ್ಚನೆ ಮಾಡಿ ನಂತರ ಶ್ರೀರಂಗಪಟ್ಟಣ ತಾಲೂಕಿನ ನೇರಲಕೆರೆಗೆ ಬುದ್ದನ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.

ಅಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಗೌತಮ ಬುದ್ಧರ ರಥಕ್ಕೆ ಚಾಲನೆ ನೀಡಲಿದ್ದು ಮಂಡ್ಯದ ಶಾಸಕ ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ .ಜೊತೆಗೆ ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಮನೋರಕಿತ ಬಂತೇಜಿ, ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ, ಪ್ರೊಫೆಸರ್ ಮಹೇಶ್ ಚಂದ್ರಗುರು,ಪ್ರೊಫೆಸರ್ ಕೆಎಸ್ ಭಗವಾನ್, ನಿವೃತ್ತ ಪೊಲೀಸ್ ಅಧಿಕಾರಿ ಡಾಕ್ಟರ್ ಸುಭಾಷ್ ಭರಣಿ, ಜ್ಞಾನ ಪ್ರಕಾಶ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಅವರು 2500 ವರ್ಷಗಳ ಹಿಂದೆ ಇತಿಹಾಸದಲ್ಲಿ ಮರೆತು ಹೋಗಿದ್ದ ಈ ನೆಲದ ಸಾಕ್ಷಿ ಪ್ರಜ್ಞೆ ಮತ್ತು ವೈಜ್ಞಾನಿಕ ಚಿಂತಕ ಭಗವಾನ್ ಗೌತಮ ಬುದ್ಧ ಅವರನ್ನು ಪರಿಚಯಿಸಿದ್ದಾರೆ.  ಅಕ್ಟೋಬರ್ 14 ,1956 ರಂದು ಇತಿಹಾಸ ಪ್ರಸಿದ್ಧ ಮಹರಾಷ್ಟ್ರದ ನಾಗಪುರ ದೀಕ್ಷ ಭೂಮಿಯಲ್ಲಿ ತಮ್ಮ 10 ಲಕ್ಷ ಅನುಯಾಯಿಗಳೊಂದಿಗೆ ಅಂಬೇಡ್ಕರ್ ಅವರು ಬೌದ್ಧ ಧಮ್ಮ ದೀಕ್ಷೆ ಪಡೆದುಕೊಂಡಿದ್ದು ಇದು ನವ ಬೌದ್ಧರು ಹುಟ್ಟಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬುದ್ಧ ಭಾರತ ಫೌಂಡೇಶನ್ ಅಧ್ಯಕ್ಷ ಜೆ ರಾಮಯ್ಯ, ಅಂಬೇಡ್ಕರ್ ವಾರಿಯರ್ ಸಂಘಟನೆಯ ಅಧ್ಯಕ್ಷ ಗಂಗರಾಜು, ಥಾಮಸ್ ,ಮೋಹನ್ ಕುಮಾರ್, ಜವರಪ್ಪ, ಲಾರೆನ್ಸ್, ವೇಣುಗೋಪಾಲ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago