ಮಂಡ್ಯ : ರಸ್ತೆ ಬದಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ.
ಮೃತರನ್ನು ಬೆಂಗಳೂರು ನಿವಾಸಿಗಳಾದ ಬೆಂಡಿಗನಹಳ್ಳಿ ನಮಿತಾ, ಇನ್ಫೋಸಿಸ್ ನೌಕರ ರಾಜಸ್ಥಾನದ ಪಂಕಜ್ ಶರ್ಮಾ, ವಂಶಿಕೃಷ್ಣ ಹೊಸಕೋಟೆ ಹಾಗೂ ರಘುನಾಥ್ ಭಜಂತ್ರಿ ಧಾರವಾಡ ಎಂದು ಗುರುತಿಸಲಾಗಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಈ ಅಪಘಾತ ಸಂಭವಿಸಿದೆ. ಇಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಹಾಸನ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್ಸಿನೊಳಗೆ ನುಗ್ಗಿದೆ.
ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…