ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು ಸಮಯಪ್ರಜ್ಞೆ ಮೆರೆದು ಕಾರಿನಿಂದ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ನಾಲೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ: ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ
ವಿಸಿ ನಾಲೆಯ ಅಕ್ಕಪಕ್ಕದಲ್ಲಿರುವ ರಸ್ತೆಗಳು ಅತ್ಯಂತ ಚಿಕ್ಕದಾಗಿದ್ದು, ತಡೆಗೋಡೆಗಳಿಲ್ಲದೇ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವಿ.ಸಿ.ನಾಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಇನ್ನೂ ಹೆಚ್ಚಿನ ಘಟನೆಗಳು ಆಗುವುದಕ್ಕಿಂತಲೂ ಮುಂಚೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…