ಮಂಡ್ಯ

ಮಂಡ್ಯ| ವಿ.ಸಿ.ನಾಲೆಗೆ ಬಿದ್ದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು ಸಮಯಪ್ರಜ್ಞೆ ಮೆರೆದು ಕಾರಿನಿಂದ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ನಾಲೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿ: ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ

ವಿಸಿ ನಾಲೆಯ ಅಕ್ಕಪಕ್ಕದಲ್ಲಿರುವ ರಸ್ತೆಗಳು ಅತ್ಯಂತ ಚಿಕ್ಕದಾಗಿದ್ದು, ತಡೆಗೋಡೆಗಳಿಲ್ಲದೇ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಿ.ಸಿ.ನಾಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಇನ್ನೂ ಹೆಚ್ಚಿನ ಘಟನೆಗಳು ಆಗುವುದಕ್ಕಿಂತಲೂ ಮುಂಚೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

6 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

7 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

7 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

7 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

8 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

17 hours ago