ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ ಈ ಘಟನೆಯ ಸಂಭವಿಸಿದ್ದು, ನಾಲೆಗೆ ತಡೆಗೋಡೆ ಇಲ್ಲದ ಕಾರಣ ಈ ದುರಂತ ನಡೆದಿದೆ. ಇನ್ನೂ ಕಾರಿನಲ್ಲಿ ನಾಲ್ಕು ಮಂದಿ ಇದ್ದರು. ಅವರಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೇ, ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೇ ಮತ್ತಿಬ್ಬರು ನಾಪತ್ತೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಈ ಘಟನೆಯ ಬಗ್ಗೆ ಪಾಂಡವಪುರ ತಾಲ್ಲೂಕಿನ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಇನ್ನೂ ಈ ವಿಚಾರದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರನ್ನು ಮೇಲೆತ್ತಲು ಹರಸಾಹಸಪಡುತ್ತಿದ್ದಾರೆ.





