ಮಂಡ್ಯ

ಮಂಡ್ಯ: ಫಲಪುಷ್ಪ ಪ್ರದರ್ಶನಕ್ಕೆ ವಿಧ್ಯುಕ್ತ ಚಾಲನೆ

ಮಂಡ್ಯ : ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೆಪ್‌ ಕಟ್‌ ಮಾಡುವ ಮೂಲಕ ಶುಕ್ರವಾರ ವಿಧ್ಯಕ್ತ ಚಾಲನೆ ನೀಡಿದರು.

ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಪುಷ್ಪಗಳು ಅರಳಿ ನಿಂತಿದ್ದು, ಗಣ್ಯರನ್ನು ಸ್ವಾಗತಿ ಕೋರುತ್ತಿದ್ದವು. ಮಧುರ ವಸ್ತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚರಕ ಹಾಗೂ ಕೈಮಗ್ಗ ನೋಡಿ ಸಚಿವರು ಪುಳಕಿತರಾದರು.

9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ಮೊದಲ ದಿನವಾದ ಶುಕ್ರವಾರ ಅಪರಾ ಜನರು ಪುಷ್ಪವನವನ್ನು ಕಣ್ತುಂಬಿಕೊಂಡರು.

ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿ ಇಲ್ಲಿ ದೊರೆಯಲಿದೆ.

ಪ್ರತಿ ದಿನ ಬೆಳಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ  ಅವಕಾಶ

ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತವಾಗಿದೆ.

ಪ್ರಮುಖ ಆಕರ್ಷಣೆಳಿವು

ಫಲಪುಷ್ಪ ಪ್ರದರ್ಶನದಲ್ಲಿ 9ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ವಿವಿಧ ಬಣ್ಣದ ಗುಲಾಬಿ ಹೂವುಗಳನ್ನು ಬಳಸಿ ಪ್ರಸಿದ್ದ ದೇವಾಲಯ ಹಾಗೂ ಪ್ರಸಿದ್ದ ಪ್ರವಾಸಿ ತಾಣಗಳನ್ನು ನಿರ್ಮಿಸಲಾಗಿದೆ.

ಜಿಲ್ಲೆಯ ಪ್ರಸಿದ್ದ ದೇವಾಲಯವಾದ ಮೇಲುಕೋಟೆಯ ಯೋಗನರಸಿಂಹ ಸ್ವಾಮಿ ದೇವಾಲಯ. ಕರ್ನಾಟಕ ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟು. ಹಳ್ಳಿ ಸೊಗಡಿನ ರೈತನ ಮನೆ, ಏಳು ಬೆಟ್ಟದ ಒಡೆಯ ಮಲೆ ಮಹದೇಶ್ವರ ದೇವಾಲಯಗಳು ಫಲಪುಷ್ಪ ಪ್ರದರ್ಶನ ಆಕರ್ಷಣೆಗಳಾಗಿವೆ.

ಯುವ ಜನತೆಯನ್ನು ಸೆಳೆಯಲು ಹತ್ತು ವಿವಿಧ ಕಡೆಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥ ಚಿತ್ರ, ವಿವಿಧ ಆಕರ್ಷಕ ಬಗೆಯ ಅಡಿನಿಯಂ ಗಿಡಗಳ ಪ್ರದರ್ಶಿಕೆ, ಬೋನ್ಸಾಯ್ ಗಿಡಗಳ ಪ್ರದರ್ಶಿಕೆ, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳ ಕೆತ್ತನೆ ಹಾಗೂ ಇಕೆಬನಾ ಜೋಡಣೆ ಎಲ್ಲರನ್ನೂ ಆಕರ್ಷಿಸಲಿವೆ.

ವಿಶೇಷ ಆಕರ್ಷಣೆಗಳಿವು

35 ಸಾವಿರಕ್ಕೂ ಹೆಚ್ಚು 40 ಬಗೆಯ ವಿವಿಧ ಜಾತಿಯ ಹೂವುಗಳ ಅಲಂಕಾರಿಕ ಕುಂಡಗಳ ಜೋಡಣೆ, 1.50 ಲಕ್ಷ ವಿವಿಧ ಜಾತಿಯ ಅಲಂಕಾರಿಕ ಗಿಡಗಳಾದ ಪೆಟೊನಿಯಾ, ಸಾಲ್ವಿಯಾ, ಅಂಟಿರೈನಂ, ಸೆಲೋಶಿಯಾ, ಮಾರಿಗೋಲ್ಡ್, ಜೀನಿಯಾ, ಸೇವಂತಿಗೆ, ಪಾಯ್ನಿಸೆಟಿಯಾಗಳು.

ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳ ಕೈಮಗ್ಗ, ನೇಕಾರರ ಸಹಕಾರ ಸಂಘಗಳು ಭಾಗವಹಿಸಿವೆ. ಕೈ ಮಗ್ಗ ನೇಕಾರರಿಂದ ತಯಾರಿಸಿರುವ ಹತ್ತಿ, ರೇಷ್ಮೆ, ಮೊಳಕಾಲ್ಮೂರು ರೇಷ್ಮೆ ಸೀರೆ, ಚಿಂತಾಮಣಿ ರೇಷ್ಮೆ ಸೀರೆ, ಕಾಟನ್ ಸೀರೆ, ಪಂಚೆ, ಬೆಡ್‌ಶೀಟ್, ಟವಲ್, ಲುಂಗಿ ಹಾಗೂ ಇತರೆ ಕೈ ಮಗ್ಗ ಉತ್ಪನ್ನಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳನ್ನು ಹಾಗೂ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗುತ್ತಿದೆ.

ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ್, ಸಿಇಒ ಶೇಖ್ ತನ್ವೀರ್ ಅಸಿಫ್,ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರ ಸಭೆಯ ಅಧ್ಯಕ್ಷ ನಾಗೇಶ್, ತೋಟಗಾರಿಕೆ ಇಲಾಖೆ ಡಿಡಿ ರೂಪ, ಕೈಮಗ್ಗ ಇಲಾಖೆ ಡಿಡಿ ರಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರೂ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

5 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

5 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

5 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

6 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

6 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

6 hours ago