ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಪುಟ್ಟೇಗೌಡರ ಪುತ್ರ ಜಿ.ಪಿ.ಪ್ರಸನ್ನ ಅವರು ಕಾಯಿ ವ್ಯಾಪಾರಿಯಾಗಿದ್ದು, ಕೊಬ್ಬರಿ ಖರೀದಿಸಿ ತಮ್ಮ ಶೆಡ್ಡನಲ್ಲಿ ಇಟ್ಟಿದ್ದರು. ಕಿಡಿಗೇಡಿಗಳ ಕೃತ್ಯವೋ ಅಥವಾ ಆಕಸ್ಮಿಕ ಬೆಂಕಿಯಿಂದಾಗಿಯೋ ಮಧ್ಯಾಹ್ನ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಇಡೀ ಶೆಡ್ ನಲ್ಲಿದ್ದ ಕೊಬ್ಬರಿ ಸಹಿತ ಎಲ್ಲಾ ಅಗತ್ಯ ವಸ್ತುಗಳು ಸುಟ್ಟು ಕರಲಾಗಿ 12 ಟನ್ ಕೊಬ್ಬರಿ ಸೇರಿ ಸುಮಾರು 55 ಲಕ್ಷ ರೂ.ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.
ವಿಷಯ ತಿಳಿದು ಎರಡು ಅಗ್ನಿಶಾಮಕದಳ ತಂಡದ ಸಿಬ್ಬಂದಿಗಳು ಸತತ ಪ್ರಯತ್ನಗಳಿಂದಾಗಿ ಬೆಂಕಿ ನಂದಿಸಿದಾದರೂ ಅಷ್ಟರಾಗಲೇ ಶೆಡ್ ನಲ್ಲಿದ್ದ ಕೊಬ್ಬರಿ ಸುಟ್ಟು ನಾಶವಾಗಿದೆ. ಮಧ್ಯಮ ಕುಟುಂಬ ವರ್ಗದ ಜಿ.ಪಿ.ಪ್ರಸನ್ನ ಅವರು ಕೊಬ್ಬರಿ, ಕಾಯಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ತಮ್ಮ ತೋಟದ ಶೆಡ್ ನಲ್ಲಿ ಶೇಖರಿಸಿಟ್ಟಿದ್ದ ಕೊಬ್ಬರಿ ಸುಟ್ಟು ನಾಶವಾಗಿರುವುದರಿಂದ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿ ಸಹಾಯಕ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಪ್ರಕರಣ ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…