ಮಂಡ್ಯ

ಮಂಡ್ಯ: ಕೆರೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ ಹಾಗೂ ತೆರವುಗೊಳಿಸಿದ ವಿವರವನ್ನು ಪಡೆದುಕೊಂಡರು.

ಕೆರೆಗಳ ಸರ್ವೆ ಮಾಡಿಕೊಡಲಾಗಿದೆ. ಅಧಿಕಾರಿಗಳು ಮಹಜರ್ ಮಾಡಿ ಒತ್ತುವರಿ ತೆರವುಗೊಳಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಿ. ಅದರ ಸಂರಕ್ಷಣೆ ಮಾಡಿಕೊಳ್ಳಲು ಯೋಜನೆ ರೂಪಿಸಿಕೊಂಡು ಅನುದಾನ ಪಡೆದು ಕ್ರಮ ಕೈಗೊಳ್ಳಿ. ಕೆರೆಗಳ ಸುತ್ತ ಆಗಿಂದಾಗ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಿ. ಕೆರೆ ಒತ್ತುವರಿ ತೆರವು ಕುರಿತು ಸರ್ಕಾರಕ್ಕೆ ವರದಿ ನೀಡಬೇಕಿದ್ದು, ವರದಿಯನ್ನು ಶೀಘ್ರವಾಗಿ ಸಲ್ಲಿಸಿ ಎಂದರು.

ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳುವವರ ವಿರುದ್ದ ಕಾನೂನು ರೀತ್ಯ ಕ್ರಮ ಕೈಗೊಳ್ಳಿ ಎಂದರು.

ಜಿಲ್ಲಾ ಪಂಚಾಯತ್. ಹೆಚ್.ಎಲ್.ಬಿ.ಸಿ, ಕಾ.ನೀ.ನಿ.ನಿ ಹಾಗೂ ಸಣ್ಣ ನೀರಾವರಿ ಇಲಾಖೆಗೆ ಒಳಪಡುವ 962 ಕೆರೆಗಳ
ನೀರನ್ನು ಪರೀಕ್ಷೆಗೊಳಪಡಿಸಿ, ಪ್ರತಿ ಕೆರೆಗಳಿಗೂ ಸಹ ಜಿ.ಪಿ.ಎಸ್. ಮ್ಯಾಪಿಂಗ್ ಕಡ್ಡಾಯವಾಗಿ ಮಾಡಿಸಿ, ಕೆರೆ ನೀರ ಕಲುಷಿತವಾಗಂದಂತ್ತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಹಾಗೂ ಸಾರ್ವಜನಿಕರು ಕೆರೆಗಳನ್ನು ಕಲುಷಿತ ಮಾಡದಂತೆ ಜಾಗೃತಿ ಸೂಚನ ಪಲಕಗಳನ್ನು ಅಳವಡಿಸಿ ಅದರ ಛಾಯಾಚಿತ್ರಗಳನ್ನು ಲಗತ್ತಿಸಿ ಎಂದರು.

ಸಾರ್ವಜನಿಕರು ಕೆರೆ ಕಲುಷಿತಗೊಳಿಸದಂತೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನರಿಗೆ ಜಾಗೃತಿ ಮುಡಿಸಿ, ಕೆರೆಗಳ ನೀರನ್ನು ಕಲುಷಿತಗೊಳಿಸುವ ಸಾರ್ವಜನಿಕರ ವಿರುದ್ಧ ಕಠಿಣ ಕ್ರಮ ಜರುಗಿಸಿ, ದೂರು ನೀಡಲು ಜಿಲ್ಲಾ ಮಟ್ಟದಲ್ಲಿ ದೂರು ನಿರ್ವಹಣಾ ಕೇಂದ್ರ ಸ್ಥಾಪಿಸಬೇಕು, ಕೆರೆಗಳನ್ನು ಸಂರಕ್ಷಿಸಲು ಸ್ಥಳೀಯವಾಗಿ ಕೆರೆ ಸಂರಕ್ಷಣ ಸಮಿತಿಯನ್ನು ರಚಿಸಿ ಎಂದು ಹೇಳಿದರು.

ಸಭೆಯಲ್ಲಿ ಪರಿಸರ ಹಾಗೂ ವಾಯುಮಾಲಿನ್ಯ ನಿಯಂತ್ರಣ ಅಧಿಕಾರಿ ಗೀತಾ, ಜಲಮಂಡಳಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮೇಘಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

13 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

14 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago