ಮಂಡ್ಯ

ಮಂಡ್ಯ: ಕೆರೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ ಹಾಗೂ ತೆರವುಗೊಳಿಸಿದ ವಿವರವನ್ನು ಪಡೆದುಕೊಂಡರು.

ಕೆರೆಗಳ ಸರ್ವೆ ಮಾಡಿಕೊಡಲಾಗಿದೆ. ಅಧಿಕಾರಿಗಳು ಮಹಜರ್ ಮಾಡಿ ಒತ್ತುವರಿ ತೆರವುಗೊಳಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಿ. ಅದರ ಸಂರಕ್ಷಣೆ ಮಾಡಿಕೊಳ್ಳಲು ಯೋಜನೆ ರೂಪಿಸಿಕೊಂಡು ಅನುದಾನ ಪಡೆದು ಕ್ರಮ ಕೈಗೊಳ್ಳಿ. ಕೆರೆಗಳ ಸುತ್ತ ಆಗಿಂದಾಗ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಿ. ಕೆರೆ ಒತ್ತುವರಿ ತೆರವು ಕುರಿತು ಸರ್ಕಾರಕ್ಕೆ ವರದಿ ನೀಡಬೇಕಿದ್ದು, ವರದಿಯನ್ನು ಶೀಘ್ರವಾಗಿ ಸಲ್ಲಿಸಿ ಎಂದರು.

ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳುವವರ ವಿರುದ್ದ ಕಾನೂನು ರೀತ್ಯ ಕ್ರಮ ಕೈಗೊಳ್ಳಿ ಎಂದರು.

ಜಿಲ್ಲಾ ಪಂಚಾಯತ್. ಹೆಚ್.ಎಲ್.ಬಿ.ಸಿ, ಕಾ.ನೀ.ನಿ.ನಿ ಹಾಗೂ ಸಣ್ಣ ನೀರಾವರಿ ಇಲಾಖೆಗೆ ಒಳಪಡುವ 962 ಕೆರೆಗಳ
ನೀರನ್ನು ಪರೀಕ್ಷೆಗೊಳಪಡಿಸಿ, ಪ್ರತಿ ಕೆರೆಗಳಿಗೂ ಸಹ ಜಿ.ಪಿ.ಎಸ್. ಮ್ಯಾಪಿಂಗ್ ಕಡ್ಡಾಯವಾಗಿ ಮಾಡಿಸಿ, ಕೆರೆ ನೀರ ಕಲುಷಿತವಾಗಂದಂತ್ತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಹಾಗೂ ಸಾರ್ವಜನಿಕರು ಕೆರೆಗಳನ್ನು ಕಲುಷಿತ ಮಾಡದಂತೆ ಜಾಗೃತಿ ಸೂಚನ ಪಲಕಗಳನ್ನು ಅಳವಡಿಸಿ ಅದರ ಛಾಯಾಚಿತ್ರಗಳನ್ನು ಲಗತ್ತಿಸಿ ಎಂದರು.

ಸಾರ್ವಜನಿಕರು ಕೆರೆ ಕಲುಷಿತಗೊಳಿಸದಂತೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನರಿಗೆ ಜಾಗೃತಿ ಮುಡಿಸಿ, ಕೆರೆಗಳ ನೀರನ್ನು ಕಲುಷಿತಗೊಳಿಸುವ ಸಾರ್ವಜನಿಕರ ವಿರುದ್ಧ ಕಠಿಣ ಕ್ರಮ ಜರುಗಿಸಿ, ದೂರು ನೀಡಲು ಜಿಲ್ಲಾ ಮಟ್ಟದಲ್ಲಿ ದೂರು ನಿರ್ವಹಣಾ ಕೇಂದ್ರ ಸ್ಥಾಪಿಸಬೇಕು, ಕೆರೆಗಳನ್ನು ಸಂರಕ್ಷಿಸಲು ಸ್ಥಳೀಯವಾಗಿ ಕೆರೆ ಸಂರಕ್ಷಣ ಸಮಿತಿಯನ್ನು ರಚಿಸಿ ಎಂದು ಹೇಳಿದರು.

ಸಭೆಯಲ್ಲಿ ಪರಿಸರ ಹಾಗೂ ವಾಯುಮಾಲಿನ್ಯ ನಿಯಂತ್ರಣ ಅಧಿಕಾರಿ ಗೀತಾ, ಜಲಮಂಡಳಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮೇಘಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago