ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ ೩ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಹಾಗೂ ಗರುಡನ ಉಕ್ಕಡ ಗ್ರಾಮಗಳ ನಡುವಿನ ಬೆಂಗಳೂರು ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ೧೦ ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರು ಸಪ್ತಗಿರಿ ಮೆಡಿಕಲ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನಿ ಮಾಯಿಸಿಂಗ್ (೧೯), ಬೆಂಗಳೂರಿನ ಖಾಸಗಿ ಕಾಲೇಜು ಬಿ.ಇ. ವಿದ್ಯಾರ್ಥಿ ಅರುಣವ್ (೧೯) ಸ್ಥಳದಲ್ಲಿಯೇ ಮತಪಟ್ಟವರು. ಅದಷ್ಟವಶಾತ್ ಕಾರಿನ ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಅದೇ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ೪ ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ೬ ಮಂದಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲ ಗಾಯಾಳುಗಳನ್ನು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನೂತನ ವರ್ಷಾಚರಣೆ ಮಾಡಿಕೊಂಡು ಮಾಯಿಸಿಂಗ್, ಅರುಣವ್ ಹಾಗೂ ಇತರೆ ನಾಲ್ಕು ಮಂದಿ ಸ್ನೇಹಿತರು ಕಿಯಾ ಕಾರಿನಲ್ಲಿ, ಮತ್ತೊಂದು ಕಾರಿನಲ್ಲಿ ಕೋಲಾರ ಮೂಲದ ವಿದ್ಯಾರ್ಥಿಗಳು ಮೈಸೂರು ಕಡೆಗೆ ತೆರಳುತ್ತಿದ್ದರು.
ಕೋಲಾರ ಮೂಲದ ವಿದ್ಯಾರ್ಥಿಗಳಿದ್ದ ಕಾರು ಸರ್ವಿಸ್ ರಸ್ತೆಯಿಂದ ಎಕ್ಸ್ಪ್ರೆಸ್ ಹೈವೆಗೆ ಎಂಟ್ರಿಯಾದಾಗ ಪಿಯೆಟ್ ಕಾರಿನ ವೇಗದಲ್ಲಿ ಸ್ವಲ್ಪ ನಿಧಾನವಾಗಿದೆ. ಎಕ್ಸ್ಪ್ರೆಸ್ ಹೈವೆಯಲ್ಲಿ ವೇಗವಾಗಿ ಬಂದ ಕಿಯಾ ಕಾರು ವೇಗ ನಿಯಂತ್ರಣ ಮಾಡಲು ಸಾಧ್ಯವಾಗದೆ ಮುಂಬದಿ ಚಲಿಸುತ್ತಿದ್ದ ಪಿಯೆಟ್ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆಯಿಂದಾಗಿ ಕಾರು ನಜ್ಜುಗುಜ್ಜಾಗಿ ಮಾಯಿಸಿಂಗ್ ಹಾಗೂ ಅರುಣವ್ ಮೃತಪಟ್ಟಿದ್ದಾರೆ ಎಂದು ವೃತ್ತ ನಿರೀಕ್ಷಕ ಬಿ.ಜಿ.ಕುಮಾರ್ ತಿಳಿಸಿದ್ದಾರೆ.
ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…
ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ ಮೈಸೂರು: ಸಣ್ಣ…
ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…
ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…
ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಮೈಸೂರು: ಹೈನುಗಾರಿಕೆಯನ್ನು ನಂಬಿರುವ…