ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು ಕಾರ್ಯ ಪಾಲಕ ಅಭಿಯಂತರ ಆಡಿಯೋ ಸಂಭಾಷಣೆ.
ಯಾವುದೇ ಕಾಮಗಾರಿಯ ಬಿಲ್ ಪಾಸ್ ಗೆ ಕಾರ್ಯ ಪಾಲಕ ಅಭಿಯಂತರರಿಗೆ 12 ರಿಂದ 15 ಪರ್ಸೆಂಟ್ ಕಮೀಷನ್ ನೀಡಬೇಕೆಂದು ಸ್ಫೋಟಕ ಮಾಹಿತಿ ಆಡಿಯೋದಲ್ಲಿ ಬಯಲಾಗಿದೆ.
ಮಂಡ್ಯ ಜಿಲ್ಲಾ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ ವಿರುದ್ದ ಕಮೀಷನ್ ದಂಧೆ ಆರೋಪ ಕೇಳಿಬಂದಿದ್ದು, ಗುತ್ತಿಗೆದಾರರಾದ ರಮೇಶ್ ಜೊತೆ ಮಾತನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
3 ಕೋಟಿ ಲಂಚ ಕೊಟ್ಟು ಮಂಡ್ಯಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿರುವ ಬಗ್ಗೆಯೂ ಕೂಡ ಕಾರ್ಯಪಾಲಕ ಅಭಿಯಂತರ ಆಡಿಯೋದಲ್ಲಿ ಹೇಳಿದ್ದಾನೆ.
ಆದರೆ ಗುತ್ತಿಗೆದಾರನ ವೈರಲ್ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಅಧಿಕಾರಿ ಉದ್ದಟತನ ತೋರಿದ್ದಾನೆ. ಮಾತ್ರವಲ್ಲದೇ ಕ್ಯಾಮೆರಾ ಕಾಣ್ತಾ ಇದ್ದಂತೆ ಕಚೇರಿಯಿಂದ ಕಾಲ್ಕಿತ್ತು ಅಧಿಕಾರಿ ಎಸ್ಕೇಪ್ ಆಗಿದ್ದಾರೆ.
ಇನ್ನು ಗುತ್ತಿಗೆದಾರನೊಬ್ಬ ತನ್ನ ಬಿಲ್ ಪಾವತಿಸಿ ಎಂದು ಮನವಿ ಮಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಧಿಕಾರಿಯ ಕಮಿಷನ್ ದಂಧೆಯ ಕರ್ಮಕಾಂಡವನ್ನು ಬಡಗುತ್ತಿಗೆದಾರ ಬಿಚ್ಚಿಟ್ಟಿದ್ದಾರೆ.
ಇನು ವೈರಲ್ ಆಡಿಯೋ ಆಧರಿಸಿ ಸಮಗ್ರ ತನಿಖೆ ನಡೆಸಲು ಆರ್ ಟಿಐ ಕಾರ್ಯಕರ್ತ ಗೋವಿಂದರಾಜು ಲೋಕಾಯುಕ್ತಕ್ಕೆ ಆಗ್ರಹಿಸಿದ್ದಾರೆ.
ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಲೈ 25 ರಿಂದ ಪಿಡಬ್ಲ್ಯೂಡಿ ಕಚೇರಿ ಮುಂದೆ ಧರಣಿ ಕೂರಲು ಸಿದ್ಧತೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…