ಮಂಡ್ಯ

ಮಂಡ್ಯ| ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಮೀಷನ್ ದಂಧೆ: ಆಡಿಯೋ ವೈರಲ್‌

ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು ಕಾರ್ಯ ಪಾಲಕ ಅಭಿಯಂತರ ಆಡಿಯೋ ಸಂಭಾಷಣೆ.

ಯಾವುದೇ ಕಾಮಗಾರಿಯ  ಬಿಲ್  ಪಾಸ್ ಗೆ ಕಾರ್ಯ ಪಾಲಕ ಅಭಿಯಂತರರಿಗೆ 12 ರಿಂದ 15 ಪರ್ಸೆಂಟ್ ಕಮೀಷನ್ ನೀಡಬೇಕೆಂದು ಸ್ಫೋಟಕ ಮಾಹಿತಿ ಆಡಿಯೋದಲ್ಲಿ ಬಯಲಾಗಿದೆ.

ಮಂಡ್ಯ ಜಿಲ್ಲಾ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ ವಿರುದ್ದ ಕಮೀಷನ್ ದಂಧೆ ಆರೋಪ ಕೇಳಿಬಂದಿದ್ದು, ಗುತ್ತಿಗೆದಾರರಾದ ರಮೇಶ್ ಜೊತೆ ಮಾತನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

3 ಕೋಟಿ ಲಂಚ ಕೊಟ್ಟು ಮಂಡ್ಯಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿರುವ ಬಗ್ಗೆಯೂ ಕೂಡ  ಕಾರ್ಯಪಾಲಕ ಅಭಿಯಂತರ ಆಡಿಯೋದಲ್ಲಿ ಹೇಳಿದ್ದಾನೆ.

ಆದರೆ ಗುತ್ತಿಗೆದಾರನ ವೈರಲ್ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಅಧಿಕಾರಿ ಉದ್ದಟತನ ತೋರಿದ್ದಾನೆ. ಮಾತ್ರವಲ್ಲದೇ ಕ್ಯಾಮೆರಾ ಕಾಣ್ತಾ ಇದ್ದಂತೆ ಕಚೇರಿಯಿಂದ ಕಾಲ್ಕಿತ್ತು ಅಧಿಕಾರಿ ಎಸ್ಕೇಪ್ ಆಗಿದ್ದಾರೆ.

ಇನ್ನು  ಗುತ್ತಿಗೆದಾರನೊಬ್ಬ ತನ್ನ ಬಿಲ್ ಪಾವತಿಸಿ ಎಂದು ಮನವಿ ಮಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ  ಸೆರೆಯಾಗಿದ್ದು, ಅಧಿಕಾರಿಯ ಕಮಿಷನ್ ದಂಧೆಯ ಕರ್ಮಕಾಂಡವನ್ನು ಬಡಗುತ್ತಿಗೆದಾರ ಬಿಚ್ಚಿಟ್ಟಿದ್ದಾರೆ.

ಇನು ವೈರಲ್ ಆಡಿಯೋ ಆಧರಿಸಿ ಸಮಗ್ರ ತನಿಖೆ ನಡೆಸಲು ಆರ್‌ ಟಿಐ ಕಾರ್ಯಕರ್ತ ಗೋವಿಂದರಾಜು ಲೋಕಾಯುಕ್ತಕ್ಕೆ ಆಗ್ರಹಿಸಿದ್ದಾರೆ.

ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಲೈ 25 ರಿಂದ ಪಿಡಬ್ಲ್ಯೂಡಿ ಕಚೇರಿ ಮುಂದೆ ಧರಣಿ ಕೂರಲು ಸಿದ್ಧತೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

andolanait

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

1 hour ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

2 hours ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

2 hours ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

2 hours ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

2 hours ago