ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು ಕಾರ್ಯ ಪಾಲಕ ಅಭಿಯಂತರ ಆಡಿಯೋ ಸಂಭಾಷಣೆ.
ಯಾವುದೇ ಕಾಮಗಾರಿಯ ಬಿಲ್ ಪಾಸ್ ಗೆ ಕಾರ್ಯ ಪಾಲಕ ಅಭಿಯಂತರರಿಗೆ 12 ರಿಂದ 15 ಪರ್ಸೆಂಟ್ ಕಮೀಷನ್ ನೀಡಬೇಕೆಂದು ಸ್ಫೋಟಕ ಮಾಹಿತಿ ಆಡಿಯೋದಲ್ಲಿ ಬಯಲಾಗಿದೆ.
ಮಂಡ್ಯ ಜಿಲ್ಲಾ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ ವಿರುದ್ದ ಕಮೀಷನ್ ದಂಧೆ ಆರೋಪ ಕೇಳಿಬಂದಿದ್ದು, ಗುತ್ತಿಗೆದಾರರಾದ ರಮೇಶ್ ಜೊತೆ ಮಾತನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
3 ಕೋಟಿ ಲಂಚ ಕೊಟ್ಟು ಮಂಡ್ಯಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿರುವ ಬಗ್ಗೆಯೂ ಕೂಡ ಕಾರ್ಯಪಾಲಕ ಅಭಿಯಂತರ ಆಡಿಯೋದಲ್ಲಿ ಹೇಳಿದ್ದಾನೆ.
ಆದರೆ ಗುತ್ತಿಗೆದಾರನ ವೈರಲ್ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಅಧಿಕಾರಿ ಉದ್ದಟತನ ತೋರಿದ್ದಾನೆ. ಮಾತ್ರವಲ್ಲದೇ ಕ್ಯಾಮೆರಾ ಕಾಣ್ತಾ ಇದ್ದಂತೆ ಕಚೇರಿಯಿಂದ ಕಾಲ್ಕಿತ್ತು ಅಧಿಕಾರಿ ಎಸ್ಕೇಪ್ ಆಗಿದ್ದಾರೆ.
ಇನ್ನು ಗುತ್ತಿಗೆದಾರನೊಬ್ಬ ತನ್ನ ಬಿಲ್ ಪಾವತಿಸಿ ಎಂದು ಮನವಿ ಮಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಧಿಕಾರಿಯ ಕಮಿಷನ್ ದಂಧೆಯ ಕರ್ಮಕಾಂಡವನ್ನು ಬಡಗುತ್ತಿಗೆದಾರ ಬಿಚ್ಚಿಟ್ಟಿದ್ದಾರೆ.
ಇನು ವೈರಲ್ ಆಡಿಯೋ ಆಧರಿಸಿ ಸಮಗ್ರ ತನಿಖೆ ನಡೆಸಲು ಆರ್ ಟಿಐ ಕಾರ್ಯಕರ್ತ ಗೋವಿಂದರಾಜು ಲೋಕಾಯುಕ್ತಕ್ಕೆ ಆಗ್ರಹಿಸಿದ್ದಾರೆ.
ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಲೈ 25 ರಿಂದ ಪಿಡಬ್ಲ್ಯೂಡಿ ಕಚೇರಿ ಮುಂದೆ ಧರಣಿ ಕೂರಲು ಸಿದ್ಧತೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…