ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು ಕಾರ್ಯ ಪಾಲಕ ಅಭಿಯಂತರ ಆಡಿಯೋ ಸಂಭಾಷಣೆ.
ಯಾವುದೇ ಕಾಮಗಾರಿಯ ಬಿಲ್ ಪಾಸ್ ಗೆ ಕಾರ್ಯ ಪಾಲಕ ಅಭಿಯಂತರರಿಗೆ 12 ರಿಂದ 15 ಪರ್ಸೆಂಟ್ ಕಮೀಷನ್ ನೀಡಬೇಕೆಂದು ಸ್ಫೋಟಕ ಮಾಹಿತಿ ಆಡಿಯೋದಲ್ಲಿ ಬಯಲಾಗಿದೆ.
ಮಂಡ್ಯ ಜಿಲ್ಲಾ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ ವಿರುದ್ದ ಕಮೀಷನ್ ದಂಧೆ ಆರೋಪ ಕೇಳಿಬಂದಿದ್ದು, ಗುತ್ತಿಗೆದಾರರಾದ ರಮೇಶ್ ಜೊತೆ ಮಾತನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
3 ಕೋಟಿ ಲಂಚ ಕೊಟ್ಟು ಮಂಡ್ಯಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿರುವ ಬಗ್ಗೆಯೂ ಕೂಡ ಕಾರ್ಯಪಾಲಕ ಅಭಿಯಂತರ ಆಡಿಯೋದಲ್ಲಿ ಹೇಳಿದ್ದಾನೆ.
ಆದರೆ ಗುತ್ತಿಗೆದಾರನ ವೈರಲ್ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಅಧಿಕಾರಿ ಉದ್ದಟತನ ತೋರಿದ್ದಾನೆ. ಮಾತ್ರವಲ್ಲದೇ ಕ್ಯಾಮೆರಾ ಕಾಣ್ತಾ ಇದ್ದಂತೆ ಕಚೇರಿಯಿಂದ ಕಾಲ್ಕಿತ್ತು ಅಧಿಕಾರಿ ಎಸ್ಕೇಪ್ ಆಗಿದ್ದಾರೆ.
ಇನ್ನು ಗುತ್ತಿಗೆದಾರನೊಬ್ಬ ತನ್ನ ಬಿಲ್ ಪಾವತಿಸಿ ಎಂದು ಮನವಿ ಮಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಧಿಕಾರಿಯ ಕಮಿಷನ್ ದಂಧೆಯ ಕರ್ಮಕಾಂಡವನ್ನು ಬಡಗುತ್ತಿಗೆದಾರ ಬಿಚ್ಚಿಟ್ಟಿದ್ದಾರೆ.
ಇನು ವೈರಲ್ ಆಡಿಯೋ ಆಧರಿಸಿ ಸಮಗ್ರ ತನಿಖೆ ನಡೆಸಲು ಆರ್ ಟಿಐ ಕಾರ್ಯಕರ್ತ ಗೋವಿಂದರಾಜು ಲೋಕಾಯುಕ್ತಕ್ಕೆ ಆಗ್ರಹಿಸಿದ್ದಾರೆ.
ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಲೈ 25 ರಿಂದ ಪಿಡಬ್ಲ್ಯೂಡಿ ಕಚೇರಿ ಮುಂದೆ ಧರಣಿ ಕೂರಲು ಸಿದ್ಧತೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…