ಮಂಡ್ಯ

ಮಂಡ್ಯ| ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಮೀಷನ್ ದಂಧೆ: ಆಡಿಯೋ ವೈರಲ್‌

ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು ಕಾರ್ಯ ಪಾಲಕ ಅಭಿಯಂತರ ಆಡಿಯೋ ಸಂಭಾಷಣೆ.

ಯಾವುದೇ ಕಾಮಗಾರಿಯ  ಬಿಲ್  ಪಾಸ್ ಗೆ ಕಾರ್ಯ ಪಾಲಕ ಅಭಿಯಂತರರಿಗೆ 12 ರಿಂದ 15 ಪರ್ಸೆಂಟ್ ಕಮೀಷನ್ ನೀಡಬೇಕೆಂದು ಸ್ಫೋಟಕ ಮಾಹಿತಿ ಆಡಿಯೋದಲ್ಲಿ ಬಯಲಾಗಿದೆ.

ಮಂಡ್ಯ ಜಿಲ್ಲಾ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ ವಿರುದ್ದ ಕಮೀಷನ್ ದಂಧೆ ಆರೋಪ ಕೇಳಿಬಂದಿದ್ದು, ಗುತ್ತಿಗೆದಾರರಾದ ರಮೇಶ್ ಜೊತೆ ಮಾತನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

3 ಕೋಟಿ ಲಂಚ ಕೊಟ್ಟು ಮಂಡ್ಯಕ್ಕೆ ಪೋಸ್ಟಿಂಗ್ ಹಾಕಿಸಿಕೊಂಡಿರುವ ಬಗ್ಗೆಯೂ ಕೂಡ  ಕಾರ್ಯಪಾಲಕ ಅಭಿಯಂತರ ಆಡಿಯೋದಲ್ಲಿ ಹೇಳಿದ್ದಾನೆ.

ಆದರೆ ಗುತ್ತಿಗೆದಾರನ ವೈರಲ್ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಅಧಿಕಾರಿ ಉದ್ದಟತನ ತೋರಿದ್ದಾನೆ. ಮಾತ್ರವಲ್ಲದೇ ಕ್ಯಾಮೆರಾ ಕಾಣ್ತಾ ಇದ್ದಂತೆ ಕಚೇರಿಯಿಂದ ಕಾಲ್ಕಿತ್ತು ಅಧಿಕಾರಿ ಎಸ್ಕೇಪ್ ಆಗಿದ್ದಾರೆ.

ಇನ್ನು  ಗುತ್ತಿಗೆದಾರನೊಬ್ಬ ತನ್ನ ಬಿಲ್ ಪಾವತಿಸಿ ಎಂದು ಮನವಿ ಮಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ  ಸೆರೆಯಾಗಿದ್ದು, ಅಧಿಕಾರಿಯ ಕಮಿಷನ್ ದಂಧೆಯ ಕರ್ಮಕಾಂಡವನ್ನು ಬಡಗುತ್ತಿಗೆದಾರ ಬಿಚ್ಚಿಟ್ಟಿದ್ದಾರೆ.

ಇನು ವೈರಲ್ ಆಡಿಯೋ ಆಧರಿಸಿ ಸಮಗ್ರ ತನಿಖೆ ನಡೆಸಲು ಆರ್‌ ಟಿಐ ಕಾರ್ಯಕರ್ತ ಗೋವಿಂದರಾಜು ಲೋಕಾಯುಕ್ತಕ್ಕೆ ಆಗ್ರಹಿಸಿದ್ದಾರೆ.

ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆಗೆ ಒತ್ತಾಯಿಸಿ ಜುಲೈ 25 ರಿಂದ ಪಿಡಬ್ಲ್ಯೂಡಿ ಕಚೇರಿ ಮುಂದೆ ಧರಣಿ ಕೂರಲು ಸಿದ್ಧತೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

21 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

22 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

22 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

22 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

22 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago