ಮಂಡ್ಯ

ಮಂಡ್ಯ ಸಮ್ಮೇಳನ | ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ; ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು.

ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸಿರುವ‌ ವೇದಿಕೆಗಳ ನಿರ್ಮಾಣ ಕಾರ್ಯದ ಸಿದ್ಧತೆ ಪರಿಶೀಲನೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದ ಮೂರು ದಿನ 7 ತಾಲೂಕು ಕೇಂದ್ರಗಳಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ 15 ವಿಶೇಷ ವಾಹನಗಳನ್ನು ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಸಮ್ಮೇಳನದ ಸ್ಥಳಕ್ಕೆ ಜನರನ್ನು ಕರೆತರಲು 15 ವಾಹನಗಳ ಸಾರಿಗೆ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ. ಮೊದಲನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಸ್ವರ್ಣಸಂದ್ರ, ಮಾಂಡವ್ಯ ಕಾಲೇಜ್, ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ಎರಡನೆಯದಾಗಿ ಮಂಡ್ಯ ಬಸ್ ನಿಲ್ದಾಣದಿಂದ ಕೋರ್ಟ್ ನಿಲ್ದಾಣ- ವಿಶ್ವವಿದ್ಯಾಲಯ- ಕಲ್ಲಹಳ್ಳಿ- ವಿ.ವಿ.ನಗರ-ಶನೇಶ್ವರ ದೇವಸ್ಥಾನ-ಚಾಮುಂಡೇಶ್ವರಿ ದೇವಸ್ಥಾನ-ಕನ್ನಿಕಾ ಪರಮೇಶ್ವರಿ ದೇವಸ್ಥಾನ-ಕರ್ನಾಟಕ ಬಾರ್ ಸರ್ಕಲ್-ಹೊಸಹಳ್ಳಿ ಸರ್ಕಲ್-ಬೆ.ರಾಮಣ್ಣ ಸರ್ಕಲ್-ಎಂವಿಜಿ ಬೇಕರಿ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಸ್ವರ್ಣಸಂದ್ರ-ಮಾಂಡವ್ಯ ಕಾಲೇಜ್-ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ಮೂರನೇಯದಾಗಿ ಹುಣಸೇಮರ-ಕಾಳಿಕಾಂಬ ದೇವಸ್ಥಾನ-ನಂದಾ ಸರ್ಕಲ್-ಫ್ಯಾಕ್ಟರಿ ಸರ್ಕಲ್-ಗುತ್ತಲು ಕಾಲೋನಿ-ಜಯಲಕ್ಷ್ಮಿ ಟಾಕೀಸ್-ಅರಕೇಶ್ವರ ದೇವಸ್ಥಾನ-ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.

ನಾಲ್ಕನೇಯದಾಗಿ ಸತ್ವ ಪಾರ್ಕಿಂಗ್ ಸ್ಥಳದಿಂದ ಉಮ್ಮಡಹಳ್ಳಿ ಗೇಟ್-ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ. ಮತ್ತು ಅದೇ ಮಾರ್ಗದಲ್ಲಿ ವಾಪಸ್ ಆಗಲಿದೆ ಎಂದು ಸಚಿವರು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

16 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

45 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

1 hour ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

1 hour ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago